ಬ್ರೇಕಿಂಗ್ ನ್ಯೂಸ್
09-02-21 03:58 pm Mangalore Correspondent ಕರಾವಳಿ
ಕೊಣಾಜೆ, ಫೆ.9: SDPI ಮುಖಂಡ ರಿಯಾಝ್ ಪರಂಗಿಪೇಟೆ ತಾಂಟ್ರೆ ಬಾ ತಾಂಟ್ ಎಂದು ಕೋಮು ಪ್ರಚೋದನಕಾರಿ ಭಾಷಣ ಮಾಡಿ ಹಿಂದು ಪರ ಸಂಘಟನೆಗಳ ಅವಹೇಳನ ಮಾಡಿ ಬೆದರಿಕೆ ಹಾಕಿದ್ದು ಈತ ಸಮಾಜದ ಸ್ವಾಸ್ಥ್ಯ ಕದಡಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದು ಪೊಲೀಸರು ತಕ್ಷಣ ಆತನನ್ನು ಬಂಧಿಸಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಮುಡಿಪು ವಲಯಯದ ಪದಾಧಿಕಾರಿಗಳು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಭಾಷಣದ ವಿಡಿಯೋ ತುಣುಕು ಹರಿದಾಡುತ್ತಿದ್ದು ಆ ಭಾಷಣದಲ್ಲಿ ರಿಯಾಝ್ ಪರಂಗಿಪೇಟೆ RSS ಮತ್ತು ಅದರ ಪರಿವಾರ ಸಂಘಟನೆಗಳಲ್ಲಿ ತನಗೆ ಹೇಳಲಿರುವುದು ಒಂದೇ..ನಿಮ್ಮನ್ನು ಎದುರಿಸಲು ನಾವು ಯಾವತ್ತೂ ಎಲ್ಲಿಯೂ ಸಿದ್ಧ. ನೀವು ತಾಂಟಲು ಬಂದರೆ ಬನ್ನಿ ತಾಂಟುವ, ಪ್ರತೀ ಗಲ್ಲಿಗಳಲ್ಲಿಯೂ ನಮ್ಮ ಯುವ ಪಡೆಯನ್ನು ನಿರ್ಮಿಸಿ ಸಂಘ ಪರಿವಾರದ ವಿರುದ್ಧ ಛೂ ಬಿಡುತ್ತೇವೆ. ಈ ಆಟ ಇನ್ನು ಆರಂಭವಾಗಲಿದೆ ಎಂಬಿತ್ಯಾದಿ ಮಾತುಗಳನ್ನು ಆಡಿ ಹಿಂದು ಪರ ಸಂಘಟನೆಗಳನ್ನು ನೇರವಾಗಿ ಸಂಘರ್ಷಕ್ಕೆ ಆಹ್ವಾನಿಸಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕುರ್ನಾಡು ಗ್ರಾಮದ ಮಿತ್ತಕೋಡಿಯಲ್ಲಿ ಈ ಕೋಮು ಪ್ರಚೋದಕ ಭಾಷಣ ಮಾಡಿದರ ಪರಿಣಾಮ ಶಾಂತಿ ಸೌಹಾರ್ದವಾಗಿದ್ದ ಕುರ್ನಾಡು ಪರಿಸರ ಅಶಾಂತಿಗೊಳಗಾಗಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಈತನ ಕೋಮು ಪ್ರಚೋದಕ ಭಾಷಣದಿಂದಾಗಿ ಮಂಗಳೂರಿನ ಲಾಲ್ ಬಾಗ್ ನಲ್ಲಿ ಹಿಂದು ಯುವಕನಿಗೆ ಚೂರಿ ಇರಿತವಾಗಿದೆ. ಈತನು ಈ ಮೊದಲೂ ಪ್ರಚೋದನಕಾರಿ ಭಾಷಣ ಮಾಡಿದ್ದು ಈತನ ವಿರುದ್ಧ ಯಾವುದೇ ಕಠಿಣ ಕ್ರಮ ಜರಗಿಲ್ಲ. ಈತನನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೊಂದು ದಿನ ಜಿಲ್ಲೆಯಲ್ಲಿ ಕೋಮು ಗಲಭೆ ನಡೆಯುವ ಸಾಧ್ಯತೆಗಳಿವೆ ಎಂದು ಜಾಗರಣ ವೇದಿಕೆ ಮುಖಂಡರು ಪೊಲೀಸ್ ಇಲಾಖೆಗೆ ದೂರಿದ್ದಾರೆ.
ಹಿರಿಯ ಮುಖಂಡರಾದ ಟಿ.ಜಿ ರಾಜಾರಾಂ ಭಟ್, ಜಗದೀಶ್ ಆಳ್ವ ಕುವೆತ್ತಬೈಲು, ಹಿಂ.ಜಾ.ವೇ ಮುಡಿಪು ವಲಯಾಧ್ಯಕ್ಷ ಪ್ರಶಾಂತ್ ಅನಂಗ, ಪ್ರಮುಖರಾದ ದಿವ್ಯರಾಜ್ ಶೆಟ್ಟಿ, ವಿಶ್ವನಾಥ ಕಡುವಾಯಿ, ರಂಜಿತ್ ಹೂಹಾಕುವಕಲ್ಲು ಇದ್ದರು.
The Hindu Jagarana Vedike activists of Konaje have filed a complaint against Riyaz Farangipete for his speech of communal disharmony in Mangalore.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm