ಬ್ರೇಕಿಂಗ್ ನ್ಯೂಸ್
09-02-21 03:58 pm Mangalore Correspondent ಕರಾವಳಿ
ಕೊಣಾಜೆ, ಫೆ.9: SDPI ಮುಖಂಡ ರಿಯಾಝ್ ಪರಂಗಿಪೇಟೆ ತಾಂಟ್ರೆ ಬಾ ತಾಂಟ್ ಎಂದು ಕೋಮು ಪ್ರಚೋದನಕಾರಿ ಭಾಷಣ ಮಾಡಿ ಹಿಂದು ಪರ ಸಂಘಟನೆಗಳ ಅವಹೇಳನ ಮಾಡಿ ಬೆದರಿಕೆ ಹಾಕಿದ್ದು ಈತ ಸಮಾಜದ ಸ್ವಾಸ್ಥ್ಯ ಕದಡಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದು ಪೊಲೀಸರು ತಕ್ಷಣ ಆತನನ್ನು ಬಂಧಿಸಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಮುಡಿಪು ವಲಯಯದ ಪದಾಧಿಕಾರಿಗಳು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಭಾಷಣದ ವಿಡಿಯೋ ತುಣುಕು ಹರಿದಾಡುತ್ತಿದ್ದು ಆ ಭಾಷಣದಲ್ಲಿ ರಿಯಾಝ್ ಪರಂಗಿಪೇಟೆ RSS ಮತ್ತು ಅದರ ಪರಿವಾರ ಸಂಘಟನೆಗಳಲ್ಲಿ ತನಗೆ ಹೇಳಲಿರುವುದು ಒಂದೇ..ನಿಮ್ಮನ್ನು ಎದುರಿಸಲು ನಾವು ಯಾವತ್ತೂ ಎಲ್ಲಿಯೂ ಸಿದ್ಧ. ನೀವು ತಾಂಟಲು ಬಂದರೆ ಬನ್ನಿ ತಾಂಟುವ, ಪ್ರತೀ ಗಲ್ಲಿಗಳಲ್ಲಿಯೂ ನಮ್ಮ ಯುವ ಪಡೆಯನ್ನು ನಿರ್ಮಿಸಿ ಸಂಘ ಪರಿವಾರದ ವಿರುದ್ಧ ಛೂ ಬಿಡುತ್ತೇವೆ. ಈ ಆಟ ಇನ್ನು ಆರಂಭವಾಗಲಿದೆ ಎಂಬಿತ್ಯಾದಿ ಮಾತುಗಳನ್ನು ಆಡಿ ಹಿಂದು ಪರ ಸಂಘಟನೆಗಳನ್ನು ನೇರವಾಗಿ ಸಂಘರ್ಷಕ್ಕೆ ಆಹ್ವಾನಿಸಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕುರ್ನಾಡು ಗ್ರಾಮದ ಮಿತ್ತಕೋಡಿಯಲ್ಲಿ ಈ ಕೋಮು ಪ್ರಚೋದಕ ಭಾಷಣ ಮಾಡಿದರ ಪರಿಣಾಮ ಶಾಂತಿ ಸೌಹಾರ್ದವಾಗಿದ್ದ ಕುರ್ನಾಡು ಪರಿಸರ ಅಶಾಂತಿಗೊಳಗಾಗಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಈತನ ಕೋಮು ಪ್ರಚೋದಕ ಭಾಷಣದಿಂದಾಗಿ ಮಂಗಳೂರಿನ ಲಾಲ್ ಬಾಗ್ ನಲ್ಲಿ ಹಿಂದು ಯುವಕನಿಗೆ ಚೂರಿ ಇರಿತವಾಗಿದೆ. ಈತನು ಈ ಮೊದಲೂ ಪ್ರಚೋದನಕಾರಿ ಭಾಷಣ ಮಾಡಿದ್ದು ಈತನ ವಿರುದ್ಧ ಯಾವುದೇ ಕಠಿಣ ಕ್ರಮ ಜರಗಿಲ್ಲ. ಈತನನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೊಂದು ದಿನ ಜಿಲ್ಲೆಯಲ್ಲಿ ಕೋಮು ಗಲಭೆ ನಡೆಯುವ ಸಾಧ್ಯತೆಗಳಿವೆ ಎಂದು ಜಾಗರಣ ವೇದಿಕೆ ಮುಖಂಡರು ಪೊಲೀಸ್ ಇಲಾಖೆಗೆ ದೂರಿದ್ದಾರೆ.
ಹಿರಿಯ ಮುಖಂಡರಾದ ಟಿ.ಜಿ ರಾಜಾರಾಂ ಭಟ್, ಜಗದೀಶ್ ಆಳ್ವ ಕುವೆತ್ತಬೈಲು, ಹಿಂ.ಜಾ.ವೇ ಮುಡಿಪು ವಲಯಾಧ್ಯಕ್ಷ ಪ್ರಶಾಂತ್ ಅನಂಗ, ಪ್ರಮುಖರಾದ ದಿವ್ಯರಾಜ್ ಶೆಟ್ಟಿ, ವಿಶ್ವನಾಥ ಕಡುವಾಯಿ, ರಂಜಿತ್ ಹೂಹಾಕುವಕಲ್ಲು ಇದ್ದರು.
The Hindu Jagarana Vedike activists of Konaje have filed a complaint against Riyaz Farangipete for his speech of communal disharmony in Mangalore.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am