ಬ್ರೇಕಿಂಗ್ ನ್ಯೂಸ್
09-02-21 05:10 pm Udupi Correspondent ಕರಾವಳಿ
ಉಡುಪಿ, ಫೆ.9: ದೇವರ ದರ್ಶನಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಬೆಂಗಳೂರು ಮೂಲದ ಯಾತ್ರಾರ್ಥಿಯೊಬ್ಬರು ಉಡುಪಿ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಡುಪಿಯಲ್ಲಿ ದೇವರ ದರ್ಶನ ಪಡೆದುಕೊಂಡು, ಊರಿಗೆ ಹೊರಡಲೆಂದು ಸರಕಾರಿ ಬಸ್ ನಿಲ್ದಾಣದಲ್ಲಿ ಸಿದ್ಧತೆಯಲ್ಲಿದ್ದಾಗ, ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ವಿಷಯ ತಿಳಿದು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಯಾತ್ರಾರ್ಥಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಪೊಲೀಸರು ಮೃತರ ಬ್ಯಾಗಿನಲ್ಲಿ ದೊರೆತ ಚೀಟಿಗಳ ಆಧಾರದಿಂದ ಮೃತರ ಸಂಬಂಧಿಕರ ವಿಳಾಸ ಪತ್ತೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಮೃತ ಯಾತ್ರಾರ್ಥಿ, ರಮೇಶ್ ರಾವ್ ಟೈಲರ್ (63) ವಿನಾಯಕ ನಗರ, ನಾಯಂಡ ಹಳ್ಳಿ, ಬೆಂಗಳೂರಿನ ನಿವಾಸಿಯೆಂದು ತಿಳಿದುಬಂದಿದೆ.
ಬಳಿಕ ಮೃತರ ಕುಟುಂಬಿಕರು ಉಡುಪಿಗೆ ಆಗಮಿಸಿದ್ದು ಶವಸಂಸ್ಕಾರ ನಡೆಸಲು ಅಸಹಾಯಕತೆ ತೋರಿದರು. ನಗರ ಠಾಣೆಯ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ನೀಡಿದ ಸಲಹೆಯಂತೆ ಕುಟುಂಬಿಕರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ಸಂಪರ್ಕಿಸಿದ್ದು ಅಸಹಾಯಕತೆ ಹೇಳಿಕೊಂಡಿದ್ದರು.
ತಕ್ಷಣ ನೆರವಿಗೆ ಬಂದಿದ್ದು ಶವ ಪರೀಕ್ಷೆ ಬಳಿಕ ಉದ್ಯಾವರ ಹಿಂದು ರುದ್ರಭೂಮಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯಸಂಸ್ಕಾರವನ್ನು ನಡೆಸಿಕೊಟ್ಟಿದ್ದಾರೆ.
Bangalorean Devotee who came to Krishna Temple at Udupi breathed his last while he was at the temple. The final rituals to take place at Udupi.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm