ಬ್ರೇಕಿಂಗ್ ನ್ಯೂಸ್
09-02-21 06:49 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.9: ಕೋಟಿ ಚೆನ್ನಯರು ಮತ್ತು ಬಿಲ್ಲವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದ ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಕೊನೆಗೂ ಕೋಟಿ ಚೆನ್ನಯರಿಗೆ ಕೈಮುಗಿದಿದ್ದಾರೆ. ಇಲ್ಲಿನ ಕೆಲ್ಲಪುತ್ತಿಗೆಯ ಗರೋಡಿಗೆ ತೆರಳಿ ಅಧಿಕಾರಿ ತಪ್ಪು ಕಾಣಿಕೆ ಸಲ್ಲಿಸಿದ್ದಾರೆ. ಅಲ್ಲದೆ ಬಹಿರಂಗ ಕ್ಷಮೆ ಯಾಚನೆಯನ್ನೂ ಮಾಡಿದ್ದಾರೆ.
ಕೆಲ್ಲಪುತ್ತಿಗೆಯ ಶ್ರೀ ಕ್ಷೇತ್ರ ಭೂತರಾಜಗುಡ್ಡೆಯ ಶ್ರೀ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರೋಡಿಗೆ ಆಗಮಿಸಿದ ಜಗದೀಶ್ ಅಧಿಕಾರಿ ತಪ್ಪು ಕಾಣಿಕೆ ಹಾಕಿದ್ದಾರೆ. ಅಲ್ಲದೆ ದೈವದ ಮುಂದೆ ಕ್ಷಮೆಯಾಚನೆ ಮಾಡಿದ್ದಾರೆ. ತನ್ನ ಹೇಳಿಕೆಯಿಂದ ಬಿಲ್ಲವ ಸಮುದಾಯಕ್ಕೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುತ್ತಿದ್ದೇನೆ. ಅಲ್ಲದೆ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರಿಗೂ ತನ್ನ ಹೇಳಿಕೆಯಿಂದ ನೊಂದಿದ್ದರೆ ಕ್ಷಮೆ ಕೋರುತ್ತೇನೆ. ತನ್ನ ಮಾತಿನಿಂದ ಉಂಟಾದ ವಿವಾದಕ್ಕೆ ಕೋಟಿ ಚೆನ್ನಯರ ಗರಡಿಯಲ್ಲಿಯೇ ನಿಂತು ಕ್ಷಮೆಯಾಚಿಸುತ್ತಿದ್ದು, ತಪ್ಪು ಕಾಣಿಕೆ ಹಾಕಿ ಎಲ್ಲ ವಿವಾದಗಳಿಗೆ ಇತಿಶ್ರೀ ಹಾಕಲು ನಿರ್ಧರಿಸಿದ್ದೇನೆ ಎಂದು ಅಧಿಕಾರಿ ಹೇಳಿದರು.




ಜನಾರ್ದನ ಪೂಜಾರಿ ನಮಗೆಲ್ಲ ಹಿರಿಯರು, ಪೂಜ್ಯರು. ಅವರ ನಿವಾಸಕ್ಕೂ ತೆರಳಿ ಕ್ಷಮೆ ಕೋರುತ್ತೇನೆ. ಜೊತೆಗೆ ಕುದ್ರೋಳಿ ಹಾಗೂ ಗೆಜ್ಜೆಗಿರಿ ಕ್ಷೇತ್ರಕ್ಕೂ ತೆರಳಿ ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚನೆ ಮಾಡುವುದಾಗಿ ಜಗದೀಶ್ ಅಧಿಕಾರಿ ಹೇಳಿದ್ದಾರೆ.
ನಿನ್ನೆಯಷ್ಟೇ ಬಿಲ್ಲವ ಸಮುದಾಯದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಜಗದೀಶ ಅಧಿಕಾರಿ ವಿರುದ್ಧ ಬಹಿರಂಗ ಸವಾಲು ಹಾಕಿದ್ದರು. ಮೂರು ದಿನದೊಳಗೆ ಗರೋಡಿಗೆ ತೆರಳಿ ಕ್ಷಮೆ ಯಾಚಿಸದಿದ್ದರೆ ಬಿಲ್ಲವ ಯುವಕರು ಅಧಿಕಾರಿ ಮುಖಕ್ಕೆ ಮಸಿ ಹಾಕಲಿದ್ದಾರೆ. ಮಸಿ ಹಾಕಿದ ಯುವಕನಿಗೆ ಒಂದು ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಈ ವಿಚಾರ ವಿವಾದಕ್ಕೆ ಕಾರಣವಾಗುತ್ತಲೇ ಜಗದೀಶ್ ಅಧಿಕಾರಿ ಇಂದು ಮೂಡುಬಿದ್ರೆಯಲ್ಲಿ ಗರೋಡಿಗೇ ತೆರಳಿ ಬಿಲ್ಲವರಲ್ಲಿ ಕ್ಷಮೆ ಕೋರಿದ್ದಾರೆ.
Defamatory words against Koti Chennayya BJP Leader Jagadish Adhikari offers forgiveness offering at the temple in Moodbidri.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm