ಬ್ರೇಕಿಂಗ್ ನ್ಯೂಸ್
11-02-21 09:19 pm Mangaluru Correspondent ಕರಾವಳಿ
ಉಳ್ಳಾಲ, ಫೆ.11: ದೇಶದಲ್ಲಿ ಇಂದು ಲವ್ ಜಿಹಾದ್, ಲ್ಯಾಂಡ್ ಜಿಹಾದ್ ಎಂಬ ಎರಡು ಪದಗಳಷ್ಟೇ ತಾಂಡವವಾಡುತ್ತಿದೆ. ಲವ್ ಜಿಹಾದ್ ಹೆಸರಿನಲ್ಲಿ ಬಡ, ಅಮಾಯಕ ಹೆಣ್ಮಕ್ಕಳನ್ನು ಮತಾಂತರಿಸಿ ನಾಲ್ಕು ಮುಸ್ಲಿಂ ಮಕ್ಕಳನ್ನು ಹೆರಿಸುವ ಯಂತ್ರ ಮಾಡುತ್ತಿದ್ದರೆ, ಇನ್ನೊಂದೆಡೆ ಸಾವಿರಾರು ಎಕರೆ ಜಮೀನು ಖರೀದಿಸಿ ಲ್ಯಾಂಡ್ ಜಿಹಾದ್ ಮಾಡಲಾಗುತ್ತಿದೆ. ಇದರ ವಿರುದ್ಧ ಹಿಂದು ಸಮಾಜ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಕೇಶವ ಮೂರ್ತಿ ಹೇಳಿದರು.



ಇತ್ತೀಚೆಗೆ ಹಿಂದು ಸಮಾಜದ ಮೇಲಾಗುತ್ತಿರುವ ಅನ್ಯಾಯ, ದೌರ್ಜನ್ಯದ ವಿರುದ್ದ ಜನಜಾಗೃತಿಗಾಗಿ ಮುಡಿಪುವಿನಲ್ಲಿ ಗುರುವಾರ ನಡೆದ ಹಿಂದು ಜಾಗೃತಿ ಸಮಾವೇಶದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಹಿಂದು ಸಮಾಜವನ್ನು ನುಂಗಿ ನೀರು ಕುಡಿಯಬಹುದು ಎಂದು ತಿಳಿದುಕೊಂಡಿದ್ದರೆ ಅದು ನಿಮ್ಮ ತಪ್ಪು ಕಲ್ಪನೆ. ನಮ್ಮ ಪೂರ್ವಜರಿಂದ ರಕ್ಷಿಸಿಕೊಂಡು ಬಂದಿರುವ ಹಿಂದು ಸಮಾಜವನ್ನು ಕೆಣಕಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದರು. ಇತಿಹಾಸ ನೋಡಿದರೆ 2000 ಕ್ರೈಸ್ತ ಮಿಷನರಿಗಳು ಬಂದು 4% ರಷ್ಟು ಜನರನ್ನು ಮಾತ್ರ ಮತಾಂತಗೊಳಿಸಿದರು. ಮುಸ್ಲಿಮರು 600 ವರ್ಷಗಳ ಕಾಲ ಆಳಿದರೂ ಶೇ. 10% ಹಿಂದುಗಳನ್ನು ಮತಾಂತರ ಮಾಡಲು ಅವರಿಂದ ಸಾಧ್ಯವಾಗಿಲ್ಲ. ಯಾಕೆಂದರೆ ನಮ್ಮ ಪೂರ್ವಜರು ಹಿಂದು ಧರ್ಮದ ರಕ್ಷಣೆಗಾಗಿ ಅಷ್ಟು ಗಟ್ಟಿಯಾಗಿ ನಿಂತಿದ್ದರು. ಇನ್ನೂ ಸಾವಿರ ವರ್ಷ ಕಳೆದರೂ ನಮ್ಮ ಹಿಂದೂ ರಾಷ್ಟ್ರವನ್ನು ಪರಿವರ್ತನೆ ಮಾಡಲು ಸಾಧ್ಯವಿಲ್ಲ ಎಂದರು.
ತಾಂಟ್ರೆ ತಾಂಟ್ರೆ ಎಂದು ಹೇಳಿದಾತನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಆತ ಹೇಳಿದ ಅಂತ ಹಿಂದು ಸಮಾಜ ಒಂದು ವೇಳೆ ತಾಂಟಿದರೆ ಏನಾಗುತ್ತದೆ ಎಂದು ಪೊಲೀಸರೇ ಅರ್ಥ ಮಾಡಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರ ಸೇವಿಕ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ಮೀನಾಕ್ಷಿ ಭಗಿನಿ ಮಾತನಾಡಿ, ನಾವು ಮಕ್ಕಳನ್ನು ಝಾನ್ಸಿರಾಣಿ, ವಿವೇಕಾನಂದ, ಶಿವಾಜಿ ಮೊದಲಾದ ಮಹಾನ್ ವ್ಯಕ್ತಿಗಳಂತೆ ಬೆಳೆಸಬೇಕು. ಸ್ತ್ರೀ ಶಕ್ತಿಯೊಂದಿಗೆ ರಾಷ್ಟ್ರಭಕ್ತಿ ಮೆರೆದು ಬಲಿಷ್ಠ ರಾಷ್ಟ್ರ ಕಟ್ಟ ಬೇಕಾಗಿದೆ ಎಂದರು. ನಾವು ಸಂಘಟಿತರಾಗಿ ಜಾಗೃತರಾಗಬೇಕಾದ ಅಗತ್ಯವಿದೆ. ಹೆಣ್ಮಕ್ಕಳು ದೇವಿಯ ಸ್ವರೂಪ. ಇಂದಿನ ಕಾಲದಲ್ಲಿ ಮಕ್ಕಳು ಫೇಸ್ ಬುಕ್ ನಂತಹ ಸಾಮಾಜಿಕ ಜಾಲತಾಣಗಳಿಗೆ ಜೋತು ಬೀಳದೆ ಎಚ್ಚೆತ್ತುಕೊಳ್ಳಬೇಕು ಎಂದರು.
26-03-26 11:14 am
HK News Staffer
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 09:28 am
HK News Staffer
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am