ಬ್ರೇಕಿಂಗ್ ನ್ಯೂಸ್
12-02-21 04:53 pm Mangalore Correspondent ಕರಾವಳಿ
ಮಂಗಳೂರು, ಫೆ.12: ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಆಗಿದ್ದ ಕನ್ನಡ ಚಿತ್ರನಟಿ ಪದ್ಮಜಾ ರಾವ್ ಇಂದು ಮಂಗಳೂರಿನ 5ನೇ ಜೆಎಂಎಫ್ ಕೋರ್ಟಿಗೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಪದ್ಮಜಾ ರಾವ್ ಅವರನ್ನು ಬಂಧಿಸಿ, ಕರೆತರುವಂತೆ ಮಂಗಳೂರಿನ ಕೋರ್ಟ್ ಬೆಂಗಳೂರಿನ ಕಲಘಟ್ಟ ಪೊಲೀಸರಿಗೆ ವಾರೆಂಟ್ ನೀಡಿತ್ತು. ಅದರಂತೆ, ಪೊಲೀಸರು ಆಕೆಯನ್ನು ಬಂಧಿಸಿ ಮಾರ್ಚ್ 8ರಂದು ಕೋರ್ಟಿಗೆ ಹಾಜರು ಮಾಡಬೇಕಿತ್ತು. ಆದರೆ, ಪದ್ಮಜಾ ರಾವ್ ವಾರೆಂಟ್ ಆದೇಶದ ಪ್ರತಿ ಸಿಗುತ್ತಿದ್ದಂತೆ ತಮ್ಮ ವಕೀಲರ ಮೂಲಕ ಮಂಗಳೂರಿನ ಕೋರ್ಟಿಗೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಪದ್ಮಜಾ ರಾವ್, ನನಗೆ ನಮ್ಮ ಕಾನೂನು, ನ್ಯಾಯಾಂಗದ ಬಗ್ಗೆ ಸಂಪೂರ್ಣ ಭರವಸೆ ಇದೆ. ಜೊತೆಗೆ ನನ್ನ ಮೇಲೆ ನನಗೆ ಭರವಸೆ ಇದೆ. ಈ ಪ್ರಕರಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ನೀವೆಲ್ಲಾ ಕಾದು ನೋಡಬೇಕು, ಈಗ ಏನನ್ನೂ ಹೇಳಲು ಆಗುವುದಿಲ್ಲ ಎಂದು ಹೇಳಿದರು.

ತುಳು ಚಿತ್ರನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ತನ್ನಿಂದ 41 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾಗಿ ಪದ್ಮಜಾ ವಿರುದ್ಧ ಕೋರ್ಟಿಗೆ ದೂರು ಸಲ್ಲಿಸಿದ್ದರು. 2018ರಲ್ಲಿ ಚಾಲಿಪೋಲಿಲು ಚಿತ್ರಕ್ಕಾಗಿ ನಟಿಸಲು ಬಂದಿದ್ದ ವೇಳೆ ಪರಿಚಯ ಆಗಿದ್ದ ಪದ್ಮಜಾ, ಆಬಳಿಕ ಹಂತ ಹಂತವಾಗಿ ಹಣ ಪಡೆದಿದ್ದರು. ಹಣವನ್ನು ತನ್ನ ವೀರು ಟಾಕೀಸ್ ಪ್ರೊಡಕ್ಷನ್ ಹೌಸ್ ಹೆಸರಲ್ಲಿ ಚೆಕ್ ಮೂಲಕ ನೀಡಿದ್ದಾಗಿ ವೀರೇಂದ್ರ ಹೇಳಿಕೊಂಡಿದ್ದರು.
Read: ತುಳು ಚಿತ್ರ ನಿರ್ದೇಶಕನಿಗೆ ವಂಚನೆ ; ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರು ಕೋರ್ಟಿನಿಂದ ಬಂಧನ ವಾರಂಟ್
Kannada actor Padmaja Rao Actress gets anticipatory bail in Mangalore court over cheque bounce case which was issued by the Mangalore 5th Additional Court. A case was filed by Tulu Director Veerendra Shetty Kavoor.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm