ಬ್ರೇಕಿಂಗ್ ನ್ಯೂಸ್
12-02-21 04:53 pm Mangalore Correspondent ಕರಾವಳಿ
ಮಂಗಳೂರು, ಫೆ.12: ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಆಗಿದ್ದ ಕನ್ನಡ ಚಿತ್ರನಟಿ ಪದ್ಮಜಾ ರಾವ್ ಇಂದು ಮಂಗಳೂರಿನ 5ನೇ ಜೆಎಂಎಫ್ ಕೋರ್ಟಿಗೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಪದ್ಮಜಾ ರಾವ್ ಅವರನ್ನು ಬಂಧಿಸಿ, ಕರೆತರುವಂತೆ ಮಂಗಳೂರಿನ ಕೋರ್ಟ್ ಬೆಂಗಳೂರಿನ ಕಲಘಟ್ಟ ಪೊಲೀಸರಿಗೆ ವಾರೆಂಟ್ ನೀಡಿತ್ತು. ಅದರಂತೆ, ಪೊಲೀಸರು ಆಕೆಯನ್ನು ಬಂಧಿಸಿ ಮಾರ್ಚ್ 8ರಂದು ಕೋರ್ಟಿಗೆ ಹಾಜರು ಮಾಡಬೇಕಿತ್ತು. ಆದರೆ, ಪದ್ಮಜಾ ರಾವ್ ವಾರೆಂಟ್ ಆದೇಶದ ಪ್ರತಿ ಸಿಗುತ್ತಿದ್ದಂತೆ ತಮ್ಮ ವಕೀಲರ ಮೂಲಕ ಮಂಗಳೂರಿನ ಕೋರ್ಟಿಗೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಪದ್ಮಜಾ ರಾವ್, ನನಗೆ ನಮ್ಮ ಕಾನೂನು, ನ್ಯಾಯಾಂಗದ ಬಗ್ಗೆ ಸಂಪೂರ್ಣ ಭರವಸೆ ಇದೆ. ಜೊತೆಗೆ ನನ್ನ ಮೇಲೆ ನನಗೆ ಭರವಸೆ ಇದೆ. ಈ ಪ್ರಕರಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ನೀವೆಲ್ಲಾ ಕಾದು ನೋಡಬೇಕು, ಈಗ ಏನನ್ನೂ ಹೇಳಲು ಆಗುವುದಿಲ್ಲ ಎಂದು ಹೇಳಿದರು.

ತುಳು ಚಿತ್ರನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ತನ್ನಿಂದ 41 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾಗಿ ಪದ್ಮಜಾ ವಿರುದ್ಧ ಕೋರ್ಟಿಗೆ ದೂರು ಸಲ್ಲಿಸಿದ್ದರು. 2018ರಲ್ಲಿ ಚಾಲಿಪೋಲಿಲು ಚಿತ್ರಕ್ಕಾಗಿ ನಟಿಸಲು ಬಂದಿದ್ದ ವೇಳೆ ಪರಿಚಯ ಆಗಿದ್ದ ಪದ್ಮಜಾ, ಆಬಳಿಕ ಹಂತ ಹಂತವಾಗಿ ಹಣ ಪಡೆದಿದ್ದರು. ಹಣವನ್ನು ತನ್ನ ವೀರು ಟಾಕೀಸ್ ಪ್ರೊಡಕ್ಷನ್ ಹೌಸ್ ಹೆಸರಲ್ಲಿ ಚೆಕ್ ಮೂಲಕ ನೀಡಿದ್ದಾಗಿ ವೀರೇಂದ್ರ ಹೇಳಿಕೊಂಡಿದ್ದರು.
Read: ತುಳು ಚಿತ್ರ ನಿರ್ದೇಶಕನಿಗೆ ವಂಚನೆ ; ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರು ಕೋರ್ಟಿನಿಂದ ಬಂಧನ ವಾರಂಟ್
Kannada actor Padmaja Rao Actress gets anticipatory bail in Mangalore court over cheque bounce case which was issued by the Mangalore 5th Additional Court. A case was filed by Tulu Director Veerendra Shetty Kavoor.
26-03-26 12:31 pm
HK News Staffer
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 09:28 am
HK News Staffer
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am