ಬ್ರೇಕಿಂಗ್ ನ್ಯೂಸ್
16-08-20 04:49 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 16: ತುಳು ಭಾಷೆಯನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ರಡಿಯಲ್ಲಿ ಸೇರಿಸಲು ಒತ್ತಾಯಿಸಿ ಇಂದು ತುಳುವರು ಟ್ವೀಟ್ ಅಭಿಯಾನ ನಡೆಸಿದ್ದಾರೆ. ಜೈ ತುಳುನಾಡು ಸಂಘಟನೆ ಎಜ್ಯುಕೇಷನ್ ಎನ್ನುವ ಹ್ಯಾಷ್ಟ್ಯಾಗ್ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದ್ದು ಸಾವಿರಾರು ಜನ ಟ್ವೀಟ್ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
5ನೇ ಅಥವಾ 8ನೇ ತರಗತಿಯ ವರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಸ್ಥಳೀಯ ಅಥವಾ ಮಾತೃಭಾಷೆಯೇ ಬೋಧನ ಮಾಧ್ಯಮವಾಗಿರಬೇಕು ಎಂಬುದನ್ನು ಉಲ್ಲೇಖಿಸಲಾಗಿದೆ. ಆದರೆ, ಕರಾವಳಿಯ ಲಕ್ಷಾಂತರ ಜನರ ಮಾತೃಭಾಷೆ ತುಳು ಆಗಿರುವ ಹಿನ್ನೆಲೆಯಲ್ಲಿ ಮಾತೃಭಾಷೆಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಅಥವಾ ತುಳುವನ್ನು ಮೂರನೇ ಐಚ್ಛಿಕ ಭಾಷೆಯಾಗಿ ಕಲಿಸಬೇಕು ಎನ್ನುವ ಹಕ್ಕೊತ್ತಾಯ ರೂಪಿಸಲಾಗಿದೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರಿಸಬೇಕೆನ್ನುವ ಒತ್ತಾಯ ಹೆಚ್ಚಿರುವ ಸಂದರ್ಭದಲ್ಲಿಯೇ ಈಗ ಶಿಕ್ಷಣದಲ್ಲಿಯೂ ತುಳು ಭಾಷೆಗೆ ಸ್ಥಾನ ನೀಡಬೇಕೆಂಬ ಒತ್ತಾಯ ಕೇಳಿಬಂದಿದ್ದು ಇದಕ್ಕೆ ಕನ್ನಡಿಗರೂ ಬೆಂಬಲ ಸೂಚಿಸಿದ್ದಾರೆ. ಕನ್ನಡದ ನಟ ಜಗ್ಗೇಶ್ ಟ್ವೀಟ್ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು ನಾನು ಕೂಡ ತುಳು ಭಾಷಿಗರ ಒತ್ತಾಯಕ್ಕೆ ಬೆಂಬಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಸಾವಿರಾರು ಮಂದಿ ಈಗಾಗಲೇ ಹ್ಯಾಷ್ಟ್ಯಾಗ್ ಎಜ್ಯುಕೇಷನ್ ಟ್ವೀಟ್ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ತುಳು ಭಾಷಿಕ ವಿದ್ಯಾರ್ಥಿಗಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗಿದ್ದು ಕೇಂದ್ರ ಮತ್ತು ರಾಜ್ಯ ಸರಕಾರದ ಕಿವಿ ತಲುಪಬಹುದೇ ಅನ್ನುವ ಕುತೂಹಲದಲ್ಲಿ ಜನರಿದ್ದಾರೆ.
ಮಲ್ಲೆ ಇಜ್ಜಿ ಯಾನ್ ಲಾ ತುಳು ಬಾಸೆಗ ನಿನ್ನೋಟ್ಟುಗು ಬರ್ಪೆ
— ನವರಸನಾಯಕ ಜಗ್ಗೇಶ್ (@Jaggesh2) August 16, 2020
ಶುಭದಿನ... https://t.co/2BB6lcZrVH
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm