ಬ್ರೇಕಿಂಗ್ ನ್ಯೂಸ್
16-08-20 04:49 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 16: ತುಳು ಭಾಷೆಯನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ರಡಿಯಲ್ಲಿ ಸೇರಿಸಲು ಒತ್ತಾಯಿಸಿ ಇಂದು ತುಳುವರು ಟ್ವೀಟ್ ಅಭಿಯಾನ ನಡೆಸಿದ್ದಾರೆ. ಜೈ ತುಳುನಾಡು ಸಂಘಟನೆ ಎಜ್ಯುಕೇಷನ್ ಎನ್ನುವ ಹ್ಯಾಷ್ಟ್ಯಾಗ್ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದ್ದು ಸಾವಿರಾರು ಜನ ಟ್ವೀಟ್ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
5ನೇ ಅಥವಾ 8ನೇ ತರಗತಿಯ ವರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಸ್ಥಳೀಯ ಅಥವಾ ಮಾತೃಭಾಷೆಯೇ ಬೋಧನ ಮಾಧ್ಯಮವಾಗಿರಬೇಕು ಎಂಬುದನ್ನು ಉಲ್ಲೇಖಿಸಲಾಗಿದೆ. ಆದರೆ, ಕರಾವಳಿಯ ಲಕ್ಷಾಂತರ ಜನರ ಮಾತೃಭಾಷೆ ತುಳು ಆಗಿರುವ ಹಿನ್ನೆಲೆಯಲ್ಲಿ ಮಾತೃಭಾಷೆಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಅಥವಾ ತುಳುವನ್ನು ಮೂರನೇ ಐಚ್ಛಿಕ ಭಾಷೆಯಾಗಿ ಕಲಿಸಬೇಕು ಎನ್ನುವ ಹಕ್ಕೊತ್ತಾಯ ರೂಪಿಸಲಾಗಿದೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರಿಸಬೇಕೆನ್ನುವ ಒತ್ತಾಯ ಹೆಚ್ಚಿರುವ ಸಂದರ್ಭದಲ್ಲಿಯೇ ಈಗ ಶಿಕ್ಷಣದಲ್ಲಿಯೂ ತುಳು ಭಾಷೆಗೆ ಸ್ಥಾನ ನೀಡಬೇಕೆಂಬ ಒತ್ತಾಯ ಕೇಳಿಬಂದಿದ್ದು ಇದಕ್ಕೆ ಕನ್ನಡಿಗರೂ ಬೆಂಬಲ ಸೂಚಿಸಿದ್ದಾರೆ. ಕನ್ನಡದ ನಟ ಜಗ್ಗೇಶ್ ಟ್ವೀಟ್ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು ನಾನು ಕೂಡ ತುಳು ಭಾಷಿಗರ ಒತ್ತಾಯಕ್ಕೆ ಬೆಂಬಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಸಾವಿರಾರು ಮಂದಿ ಈಗಾಗಲೇ ಹ್ಯಾಷ್ಟ್ಯಾಗ್ ಎಜ್ಯುಕೇಷನ್ ಟ್ವೀಟ್ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ತುಳು ಭಾಷಿಕ ವಿದ್ಯಾರ್ಥಿಗಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗಿದ್ದು ಕೇಂದ್ರ ಮತ್ತು ರಾಜ್ಯ ಸರಕಾರದ ಕಿವಿ ತಲುಪಬಹುದೇ ಅನ್ನುವ ಕುತೂಹಲದಲ್ಲಿ ಜನರಿದ್ದಾರೆ.
ಮಲ್ಲೆ ಇಜ್ಜಿ ಯಾನ್ ಲಾ ತುಳು ಬಾಸೆಗ ನಿನ್ನೋಟ್ಟುಗು ಬರ್ಪೆ
— ನವರಸನಾಯಕ ಜಗ್ಗೇಶ್ (@Jaggesh2) August 16, 2020
ಶುಭದಿನ... https://t.co/2BB6lcZrVH
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm