ಬ್ರೇಕಿಂಗ್ ನ್ಯೂಸ್
14-02-21 01:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14; ರೈಲು ಡಿಕ್ಕಿ ಹೊಡೆದು ಬ್ಯಾಂಕ್ ಉದ್ಯೋಗಿಯೊಬ್ಬ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ.
ಕೋಟೆಕಾರು, ಬೀರಿ ಭಂಡಾರಮನೆ ಬಳಿಯ ನಿವಾಸಿ ಸತೀಶ್ಚಂದ್ರ ನಾಯ್ಕ್ (28) ಮೃತ ಯುವಕನಾಗಿದ್ದು ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರೈಲು ಹಳಿಯಿಂದ ದೂರಕ್ಕೆ ಎಸೆಯಲ್ಪಟ್ಟ ಸ್ಥಿತಿಯಲ್ಲಿದ್ದು ಶವದ ಮೈಯ ಬಟ್ಟೆ ಹರಿದು ಚಿಂದಿಯಾಗಿದೆ. ಹಳಿ ದಾಟುವಾಗ ರೈಲು ಡಿಕ್ಕಿಯಾಗಿದ್ದು ಎಳಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮಧ್ಯಾಹ್ನ ಹೊತ್ತಿಗೆ ಶವ ನೋಡಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸತೀಶ್ಚಂದ್ರ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದು ಸಾಲೆತ್ತೂರು ಶಾಖೆಯಿಂದ ಇತ್ತೀಚೆಗಷ್ಟೆ ಕೊಡಗಿನ ಮಡಿಕೇರಿಗೆ ವರ್ಗಾವಣೆಗೊಂಡಿದ್ದರು. ಇಂದು ವಾರದ ರಜಾ ದಿನ ಆಗಿದ್ದರಿಂದ ನಿನ್ನೆ ಮಡಿಕೇರಿಯಿಂದ ಊರಿಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆಗೆ ಮನೆಗೆ ಬಂದಿದ್ದ ಸತೀಶ್ವಂದ್ರ, ತೊಕ್ಕೊಟ್ಟಿಗೆ ಹೋಗಿದ್ದವರು ಹಿಂತಿರುಗಿ ಬಂದಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.


ಸತೀಶ್ಚಂದ್ರ ಅವಿವಾಹಿತರಾಗಿದ್ದು ತೀವ್ರ ಕುಡಿತದ ಚಟ ಹೊಂದಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಗೆಳೆಯರ ಜೊತೆ ಕುಡಿತದ ಪಾರ್ಟಿ ಮಾಡಿದ್ದ ಸತೀಶ್ವಂದ್ರ, ಮನೆಗೆ ತೆರಳಿರಲಿಲ್ಲ. ರಾತ್ರಿ ಎಲ್ಲಿದ್ದರು ಎನ್ನುವುದು ಗೊತ್ತಾಗಿಲ್ಲ. ಕುಡಿತದ ನಶೆಯಲ್ಲಿ ಇಂದು ಬೆಳಗ್ಗೆ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಶಂಕಿಸಲಾಗಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
A Bank Employee was found dead after he was Knocked Down by a speed Train at Thokottu in Mangalore. The deceased had been identified as Satishchandra. It is said that he had consumed alcohol and was out of control.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm