ಬ್ರೇಕಿಂಗ್ ನ್ಯೂಸ್
14-02-21 01:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14; ರೈಲು ಡಿಕ್ಕಿ ಹೊಡೆದು ಬ್ಯಾಂಕ್ ಉದ್ಯೋಗಿಯೊಬ್ಬ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ.
ಕೋಟೆಕಾರು, ಬೀರಿ ಭಂಡಾರಮನೆ ಬಳಿಯ ನಿವಾಸಿ ಸತೀಶ್ಚಂದ್ರ ನಾಯ್ಕ್ (28) ಮೃತ ಯುವಕನಾಗಿದ್ದು ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರೈಲು ಹಳಿಯಿಂದ ದೂರಕ್ಕೆ ಎಸೆಯಲ್ಪಟ್ಟ ಸ್ಥಿತಿಯಲ್ಲಿದ್ದು ಶವದ ಮೈಯ ಬಟ್ಟೆ ಹರಿದು ಚಿಂದಿಯಾಗಿದೆ. ಹಳಿ ದಾಟುವಾಗ ರೈಲು ಡಿಕ್ಕಿಯಾಗಿದ್ದು ಎಳಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮಧ್ಯಾಹ್ನ ಹೊತ್ತಿಗೆ ಶವ ನೋಡಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸತೀಶ್ಚಂದ್ರ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದು ಸಾಲೆತ್ತೂರು ಶಾಖೆಯಿಂದ ಇತ್ತೀಚೆಗಷ್ಟೆ ಕೊಡಗಿನ ಮಡಿಕೇರಿಗೆ ವರ್ಗಾವಣೆಗೊಂಡಿದ್ದರು. ಇಂದು ವಾರದ ರಜಾ ದಿನ ಆಗಿದ್ದರಿಂದ ನಿನ್ನೆ ಮಡಿಕೇರಿಯಿಂದ ಊರಿಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆಗೆ ಮನೆಗೆ ಬಂದಿದ್ದ ಸತೀಶ್ವಂದ್ರ, ತೊಕ್ಕೊಟ್ಟಿಗೆ ಹೋಗಿದ್ದವರು ಹಿಂತಿರುಗಿ ಬಂದಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.


ಸತೀಶ್ಚಂದ್ರ ಅವಿವಾಹಿತರಾಗಿದ್ದು ತೀವ್ರ ಕುಡಿತದ ಚಟ ಹೊಂದಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಗೆಳೆಯರ ಜೊತೆ ಕುಡಿತದ ಪಾರ್ಟಿ ಮಾಡಿದ್ದ ಸತೀಶ್ವಂದ್ರ, ಮನೆಗೆ ತೆರಳಿರಲಿಲ್ಲ. ರಾತ್ರಿ ಎಲ್ಲಿದ್ದರು ಎನ್ನುವುದು ಗೊತ್ತಾಗಿಲ್ಲ. ಕುಡಿತದ ನಶೆಯಲ್ಲಿ ಇಂದು ಬೆಳಗ್ಗೆ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಶಂಕಿಸಲಾಗಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
A Bank Employee was found dead after he was Knocked Down by a speed Train at Thokottu in Mangalore. The deceased had been identified as Satishchandra. It is said that he had consumed alcohol and was out of control.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm