ಬ್ರೇಕಿಂಗ್ ನ್ಯೂಸ್
15-02-21 11:07 am Mangalore Correspondent ಕರಾವಳಿ
ಉಳ್ಳಾಲ: ಫೆ.15: ಕಾಲ ಮಿತಿಯನ್ನು ಮೀರಿ ನಡೆಸಲಾಗುತ್ತಿದ್ದ ಅದ್ಧೂರಿ ಹೈ ವೋಲ್ಟೇಜ್ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವನ್ನು ಪೊಲೀಸರು ಸ್ಥಗಿತಗೊಳಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.

ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ರಂಜಿತ್ ಬಂಡಾರು ನೇತೃತ್ವದ ಪೊಲೀಸರ ತಂಡವು ನಿನ್ನೆ ರಾತ್ರಿ ನಡೆಯುತ್ತಿದ್ದ ಹೊನಲು ಬೆಳಕಿನ ಅದ್ದೂರಿ ಕ್ರಿಕೆಟ್ ಪಂದ್ಯಾಟವನ್ನು ಅರ್ಧಕ್ಕೆ ಸ್ಥಗಿತಗೊಳಿಸಿದೆ. ದೇರಳಕಟ್ಟೆ ಫ್ರೆಂಡ್ಸ್ ಸರ್ಕಲ್ ನೆರಳಲ್ಲಿ ದೇರಳಕಟ್ಟೆಯ ಗ್ರೀನ್ ಗ್ರೌಂಡ್ ಮೈದಾನದಲ್ಲಿ ಶನಿವಾರ ಸಂಜೆಯಿಂದ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಡಿಎಫ್ ಸಿ ಪ್ರೆಸೆಂಟ್ ಸೌಹಾರ್ದ ಟ್ರೋಫಿ - 2021 ಪಂದ್ಯಾಟವನ್ನು ಆಯೋಜಿಸಲಾಗಿತ್ತು. ಪೊಲೀಸರು ರಾತ್ರಿ 11 ಗಂಟೆಯ ವರೆಗೆ ಸಮಯದ ಅವಕಾಶ ಕೊಟ್ಟಿದ್ದರು. ಆದರೆ, ಶನಿವಾರವೂ ರಾತ್ರಿ 12 ಗಂಟೆ ತನಕ ಕ್ರಿಕೆಟ್ ನಡೆದಿತ್ತು. ಆದಿತ್ಯವಾರ ಸಂಜೆ ಶುರುವಾದ ಕ್ರಿಕೆಟ್ ರಾತ್ರಿ 12 ಕಳೆದರೂ, ನಿಂತಿರಲಿಲ್ಲ. ಬಳಿಕ ರಾತ್ರಿ ಒಂದು ಗಂಟೆ ಆದರೂ ಫೈನಲ್ ಪಂದ್ಯಾಟ ಮುಗಿದಿರಲಿಲ್ಲ. ಸ್ಥಳಕ್ಕೆ ಬಂದ ಎಸಿಪಿ ರಂಜಿತ್ ಬಂಡಾರು ಮತ್ತು ಕೊಣಾಜೆ ಪೊಲೀಸರು ಸೆಮಿಫೈನಲ್ ಮತ್ತು ಫೈನಲ್ ಎರಡು ಪಂದ್ಯ ಬಾಕಿ ಉಳಿದಿರುವಂತೆ ವಿದ್ಯುತ್ ದೀಪಗಳನ್ನು ಬಂದ್ ಮಾಡಿಸಿ ಕ್ರಿಕೆಟ್ ಪಂದ್ಯಾಟವನ್ನು ಸ್ಥಗಿತಗೊಳಿಸಿದ್ದಾರೆ.


ಎಸಿಪಿ ಮಾತಿಗೆ ಬೆಲೆ ಕೊಟ್ಟ ಪಂದ್ಯ ಆಯೋಜಕರು ಇಂದು ಮಧ್ಯಾಹ್ನ 2 ಗಂಟೆಗೆ ಒಂದು ಸೆಮಿಫೈನಲ್ ಮತ್ತು ಫೈನಲ್ ಪಂದ್ಯವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ಅಲ್ಲದೆ, ನೆರೆದಿದ್ದ ಬೃಹತ್ ಕ್ರಿಕೆಟ್ ಅಭಿಮಾನಿಗಳು ಮತ್ತು ಆಟಗಾರರನ್ನು ಶಾಂತಿಯುತವಾಗಿ ಮನೆಗೆ ತೆರಳಲು ಸೂಚಿಸಿದ್ದಾರೆ.
ಶನಿವಾರ ರಾತ್ರಿ ಔಪಚಾರಿಕ ಓವರ್ ಆರ್ಮ್ ಕ್ರಿಕೆಟ್ ಪಂದ್ಯದಲ್ಲಿ ಕೊಣಾಜೆ ಪೊಲೀಸ್ ಮತ್ತು ಉಳ್ಳಾಲ ಪೊಲೀಸರ ನಡುವೆ ಪಂದ್ಯ ನಡೆದು ಕೊಣಾಜೆ ಪೊಲೀಸರು ಜಯ ಗಳಿಸಿದ್ದರು.

8 ಓವರ್ ಗಳ ಪಂದ್ಯಾಟವನ್ನು ಆಯೋಜಕರು 6 ಓವರ್ ಗಳಿಗೆ ಸೀಮಿತಗೊಳಿಸಿದರೂ ಸಮಯಕ್ಕೆ ಸರಿಯಾಗಿ ಪಂದ್ಯ ಮುಗಿಸಲು ಸಾಧ್ಯವಾಗಿಲ್ಲ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಿ ಬಾಯ್ಸ್ ಅಳೇಕಳ ಮತ್ತು ಕೀರ್ತಿ ಸ್ಪೋರ್ಟಿಂಗ್ ಉಳ್ಳಾಲ ಬೈಲ್ ತಂಡಗಳು ಸೆಣಸಿ ಕೀರ್ತಿ ಉಳ್ಳಾಲಬೈಲ್ ತಂಡವು ಫೈನಲ್ ಪ್ರವೇಶಿಸಿತ್ತು. ಎರಡನೇ ಸೆಮಿಫೈನಲ್ ಪಂದ್ಯಕ್ಕೆ ಯಂಗ್ ಪ್ರೆಂಡ್ಸ್ ಉರ್ವ ಮತ್ತು ಎನ್.ಎಮ್ ತಂಡಗಳು ಸೆಣಸಲು ರೆಡಿಯಾದಾಗಲೇ ಪೊಲೀಸರು ಎಂಟ್ರಿ ನೀಡಿ ಪಂದ್ಯವನ್ನು ಸ್ಥಗಿತಗೊಳಿಸಿದ್ದಾರೆ. ಒಂದು ಸೆಮಿಫೈನಲ್ ಮತ್ತು ಫೈನಲ್ ಪಂದ್ಯವು ಇಂದು ಮಧ್ಯಾಹ್ನ 2 ಗಂಟೆಗೆ ಗ್ರೀನ್ ಗ್ರೌಂಡಲ್ಲಿ ನಡೆಯಲಿದೆ.
Police Stop High Voltage cricket tournament held at Derlakatte for playing the game than the scheduled time.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am