ಬ್ರೇಕಿಂಗ್ ನ್ಯೂಸ್
15-02-21 05:41 pm Mangalore Correspondent ಕರಾವಳಿ
ಉಳ್ಳಾಲ: ಫೆ.15 : ನರಿಂಗಾನ ಗ್ರಾಮ ಪಂಚಾಯತಿಯ 17 ಸ್ಥಾನಗಳಲ್ಲಿ 17 ಸ್ಥಾನಗಳನ್ನೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದು ಮಂಗಳೂರು ಕ್ಷೇತ್ರದಲ್ಲಿ ಹೊಸ ದಾಖಲೆಯಾಗಿತ್ತು. ಇದೀಗ ಪಂಚಾಯತಿ ಆಡಳಿತದ ಗಾದಿಗೆ ಇಬ್ಬರು ಆಯ್ಕೆಯಾಗಿದ್ದು ನೂತನ ಅಧ್ಯಕ್ಷರಾಗಿ ಶೈಲಜಾ ಶೆಟ್ಟಿ, ಉಪಾಧ್ಯಕ್ಷರಾಗಿ ನವಾಝ್ ಅವಿರೋಧ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಪಂ ಅಧ್ಯಕ್ಷ , ಉಪಾಧ್ಯಕ್ಷರುಗಳಾಗಿ ಶೈಲಜಾ ಶೆಟ್ಟಿ ಹಾಗೂ ನವಾಝ್ ಸೋಮವಾರ ಅಧಿಕಾರ ಸ್ವೀಕರಿಸಿದರು. ನರಿಂಗಾನ ಗ್ರಾಮ ಪಂಚಾಯಿತಿಯ ಒಟ್ಟು 17 ಸದಸ್ಯರ ಪೈಕಿ 17 ಮಂದಿಯೂ ಕಾಂಗ್ರೆಸ್ ಬೆಂಬಲಿತರೇ ಆಯ್ಕೆಯಾಗಿರುವುದು ಮಂಗಳೂರು ಕ್ಷೇತ್ರದಲ್ಲಿ ದಾಖಲೆಯಾಗಿದೆ. ಈ ವೇಳೆ ಮಾತನಾಡಿದ ಉಪಾಧ್ಯಕ್ಷ ನವಾಝ್, ತಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಯೋಜನೆಯ ಅನುಷ್ಠಾನ, ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, ನಿವೇಶನ ರಹಿತರಿಗೆ ನಿವೇಶನ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯಕ್ ಚುನಾವಣಾ ಅಧಿಕಾರಿಯಾಗಿದ್ದರು.ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಂಚಾಯಿತಿ ಸಮಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಅಬೂಬಕ್ಕರ್ ಸಿದ್ದಿಕ್ ಪಾರೆ ಹಾಗೂ ಜೋಸೆಫ್ ಕುಟಿನ್ಹಾ, ವಲಯಾಧ್ಯಕ್ಷ ಹನೀಫ್ ಚಂದಹಿತ್ಲು, ಪಜೀರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಫೀಕ್, ಮಾಜಿ ಉಪಾದ್ಯಕ್ಷ ಇಮ್ತಿಯಾಝ್, ನರಿಂಗಾನ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಜಯಂತಿ, ಸಬೀರ್, ಶಾಂತಿ ಡಿಸೋಜ, ಮೊಹಮ್ಮದ್ ನವಾಝ್, ಲತೀಫ್ ಎಂ, ಸುನೀತಾ ಡಿಸೋಜ, ಗಿರಿಜಾ, ಅಬ್ದುಲ್ ರಹಿಮಾನ್ ಸಿ.ಎಚ್, ಮಹಮ್ಮದ್ ಫಯಾಝ್, ತಾಹಿರಾ, ಸಲೀಂ ಎ, ಮಲ್ಲಿಕಾ, ಮುರಲೀಧರ ಶೆಟ್ಟಿ, ಶೇಖಬ್ಬ, ಜ್ಯೋತಿ ಡಿಸೋಜ, ಸುಂದರ ಉಪಸ್ಥಿತರಿದ್ದರು.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm