ಬ್ರೇಕಿಂಗ್ ನ್ಯೂಸ್
15-02-21 05:41 pm Mangalore Correspondent ಕರಾವಳಿ
ಉಳ್ಳಾಲ: ಫೆ.15 : ನರಿಂಗಾನ ಗ್ರಾಮ ಪಂಚಾಯತಿಯ 17 ಸ್ಥಾನಗಳಲ್ಲಿ 17 ಸ್ಥಾನಗಳನ್ನೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದು ಮಂಗಳೂರು ಕ್ಷೇತ್ರದಲ್ಲಿ ಹೊಸ ದಾಖಲೆಯಾಗಿತ್ತು. ಇದೀಗ ಪಂಚಾಯತಿ ಆಡಳಿತದ ಗಾದಿಗೆ ಇಬ್ಬರು ಆಯ್ಕೆಯಾಗಿದ್ದು ನೂತನ ಅಧ್ಯಕ್ಷರಾಗಿ ಶೈಲಜಾ ಶೆಟ್ಟಿ, ಉಪಾಧ್ಯಕ್ಷರಾಗಿ ನವಾಝ್ ಅವಿರೋಧ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಪಂ ಅಧ್ಯಕ್ಷ , ಉಪಾಧ್ಯಕ್ಷರುಗಳಾಗಿ ಶೈಲಜಾ ಶೆಟ್ಟಿ ಹಾಗೂ ನವಾಝ್ ಸೋಮವಾರ ಅಧಿಕಾರ ಸ್ವೀಕರಿಸಿದರು. ನರಿಂಗಾನ ಗ್ರಾಮ ಪಂಚಾಯಿತಿಯ ಒಟ್ಟು 17 ಸದಸ್ಯರ ಪೈಕಿ 17 ಮಂದಿಯೂ ಕಾಂಗ್ರೆಸ್ ಬೆಂಬಲಿತರೇ ಆಯ್ಕೆಯಾಗಿರುವುದು ಮಂಗಳೂರು ಕ್ಷೇತ್ರದಲ್ಲಿ ದಾಖಲೆಯಾಗಿದೆ. ಈ ವೇಳೆ ಮಾತನಾಡಿದ ಉಪಾಧ್ಯಕ್ಷ ನವಾಝ್, ತಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಯೋಜನೆಯ ಅನುಷ್ಠಾನ, ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, ನಿವೇಶನ ರಹಿತರಿಗೆ ನಿವೇಶನ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯಕ್ ಚುನಾವಣಾ ಅಧಿಕಾರಿಯಾಗಿದ್ದರು.ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಂಚಾಯಿತಿ ಸಮಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಅಬೂಬಕ್ಕರ್ ಸಿದ್ದಿಕ್ ಪಾರೆ ಹಾಗೂ ಜೋಸೆಫ್ ಕುಟಿನ್ಹಾ, ವಲಯಾಧ್ಯಕ್ಷ ಹನೀಫ್ ಚಂದಹಿತ್ಲು, ಪಜೀರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಫೀಕ್, ಮಾಜಿ ಉಪಾದ್ಯಕ್ಷ ಇಮ್ತಿಯಾಝ್, ನರಿಂಗಾನ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಜಯಂತಿ, ಸಬೀರ್, ಶಾಂತಿ ಡಿಸೋಜ, ಮೊಹಮ್ಮದ್ ನವಾಝ್, ಲತೀಫ್ ಎಂ, ಸುನೀತಾ ಡಿಸೋಜ, ಗಿರಿಜಾ, ಅಬ್ದುಲ್ ರಹಿಮಾನ್ ಸಿ.ಎಚ್, ಮಹಮ್ಮದ್ ಫಯಾಝ್, ತಾಹಿರಾ, ಸಲೀಂ ಎ, ಮಲ್ಲಿಕಾ, ಮುರಲೀಧರ ಶೆಟ್ಟಿ, ಶೇಖಬ್ಬ, ಜ್ಯೋತಿ ಡಿಸೋಜ, ಸುಂದರ ಉಪಸ್ಥಿತರಿದ್ದರು.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm