ಬ್ರೇಕಿಂಗ್ ನ್ಯೂಸ್
15-02-21 05:41 pm Mangalore Correspondent ಕರಾವಳಿ
ಉಳ್ಳಾಲ: ಫೆ.15 : ನರಿಂಗಾನ ಗ್ರಾಮ ಪಂಚಾಯತಿಯ 17 ಸ್ಥಾನಗಳಲ್ಲಿ 17 ಸ್ಥಾನಗಳನ್ನೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದು ಮಂಗಳೂರು ಕ್ಷೇತ್ರದಲ್ಲಿ ಹೊಸ ದಾಖಲೆಯಾಗಿತ್ತು. ಇದೀಗ ಪಂಚಾಯತಿ ಆಡಳಿತದ ಗಾದಿಗೆ ಇಬ್ಬರು ಆಯ್ಕೆಯಾಗಿದ್ದು ನೂತನ ಅಧ್ಯಕ್ಷರಾಗಿ ಶೈಲಜಾ ಶೆಟ್ಟಿ, ಉಪಾಧ್ಯಕ್ಷರಾಗಿ ನವಾಝ್ ಅವಿರೋಧ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಪಂ ಅಧ್ಯಕ್ಷ , ಉಪಾಧ್ಯಕ್ಷರುಗಳಾಗಿ ಶೈಲಜಾ ಶೆಟ್ಟಿ ಹಾಗೂ ನವಾಝ್ ಸೋಮವಾರ ಅಧಿಕಾರ ಸ್ವೀಕರಿಸಿದರು. ನರಿಂಗಾನ ಗ್ರಾಮ ಪಂಚಾಯಿತಿಯ ಒಟ್ಟು 17 ಸದಸ್ಯರ ಪೈಕಿ 17 ಮಂದಿಯೂ ಕಾಂಗ್ರೆಸ್ ಬೆಂಬಲಿತರೇ ಆಯ್ಕೆಯಾಗಿರುವುದು ಮಂಗಳೂರು ಕ್ಷೇತ್ರದಲ್ಲಿ ದಾಖಲೆಯಾಗಿದೆ. ಈ ವೇಳೆ ಮಾತನಾಡಿದ ಉಪಾಧ್ಯಕ್ಷ ನವಾಝ್, ತಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಯೋಜನೆಯ ಅನುಷ್ಠಾನ, ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, ನಿವೇಶನ ರಹಿತರಿಗೆ ನಿವೇಶನ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯಕ್ ಚುನಾವಣಾ ಅಧಿಕಾರಿಯಾಗಿದ್ದರು.ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಂಚಾಯಿತಿ ಸಮಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಅಬೂಬಕ್ಕರ್ ಸಿದ್ದಿಕ್ ಪಾರೆ ಹಾಗೂ ಜೋಸೆಫ್ ಕುಟಿನ್ಹಾ, ವಲಯಾಧ್ಯಕ್ಷ ಹನೀಫ್ ಚಂದಹಿತ್ಲು, ಪಜೀರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಫೀಕ್, ಮಾಜಿ ಉಪಾದ್ಯಕ್ಷ ಇಮ್ತಿಯಾಝ್, ನರಿಂಗಾನ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಜಯಂತಿ, ಸಬೀರ್, ಶಾಂತಿ ಡಿಸೋಜ, ಮೊಹಮ್ಮದ್ ನವಾಝ್, ಲತೀಫ್ ಎಂ, ಸುನೀತಾ ಡಿಸೋಜ, ಗಿರಿಜಾ, ಅಬ್ದುಲ್ ರಹಿಮಾನ್ ಸಿ.ಎಚ್, ಮಹಮ್ಮದ್ ಫಯಾಝ್, ತಾಹಿರಾ, ಸಲೀಂ ಎ, ಮಲ್ಲಿಕಾ, ಮುರಲೀಧರ ಶೆಟ್ಟಿ, ಶೇಖಬ್ಬ, ಜ್ಯೋತಿ ಡಿಸೋಜ, ಸುಂದರ ಉಪಸ್ಥಿತರಿದ್ದರು.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am