ಬ್ರೇಕಿಂಗ್ ನ್ಯೂಸ್
15-02-21 06:09 pm Mangalore Correspondent ಕರಾವಳಿ
ಮಂಗಳೂರು, ಫೆ.15: ಸುರತ್ಕಲ್ (ಎನ್ಐಟಿಕೆ) ಟೋಲ್ ಕೇಂದ್ರದಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುತ್ತಾರೆಂಬ ನೆಲೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಹಾಗೂ ಮುಲ್ಕಿ ನಾಗರಿಕ ಅಭಿವೃದ್ದಿ ಸಮಿತಿಯ ಮುಖಂಡರು ಸುರತ್ಕಲ್ ಟೋಲ್ ಕೇಂದ್ರದಲ್ಲಿ ಬೆಳಗ್ಗಿನಿಂದಲೇ ಜಮಾಯಿಸಿದ್ದರು. ಈ ವೇಳೆ, ಟೋಲ್ ಸಂಗ್ರಹ ಗುತ್ತಿಗೆದಾರರ ಪ್ರತಿನಿಧಿಗಳು, ಸ್ಥಳೀಯರ ವಾಹನಗಳ ರಿಯಾಯ್ತಿಯನ್ನು ರದ್ದುಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅಂತಹ ಸೂಚನೆಯೇ ಸಂಬಂಧಪಟ್ಟ ಅಧಿಕಾರಿಗಳಿಂದ ಬಂದಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೆ, ಸ್ಥಳೀಯ ವಾಹನಗಳು ಸಂಚರಿಸುವ ಪಥವನ್ನು ಫಾಸ್ಟ್ ಟ್ಯಾಗ್ ಮುಕ್ತವನ್ನಾಗಿಯೇ ಸದ್ಯಕ್ಕೆ ಮುಂದುವರಿಸಲಾಗುವುದು ಎಂದು ಗುತ್ತಿಗೆದಾರರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಅಲ್ಲಿ ಸೇರಿದ್ದ ಸಂಘಟನೆಗಳ ಪ್ರಮುಖರು ಸಭೆ ನಡೆಸಿದ್ದು, ಸ್ಥಳೀಯ ವಾಹನಗಳ ಉಚಿತ ಪ್ರಯಾಣಕ್ಕೆ ಭರವಸೆ ನೀಡಿರುವುದರಿಂದ ಸದ್ಯ ಪ್ರತಿಭಟನೆ ನಡೆಸದಿರಲು ನಿರ್ಧರಿಸಿದ್ದಾರೆ. ಒಂದ್ವೇಳೆ ದಿಢೀರ್ ಶುಲ್ಕ ವಿಧಿಸಿದರೆ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದರು.


ಇದೇ ವೇಳೆ, ಸುರತ್ಕಲ್ ಟೋಲ್ ಕೇಂದ್ರವನ್ನು ಅಲ್ಲಿಂದ ತೆರವುಗೊಳಿಸುವ ಹೋರಾಟವನ್ನು ತೀವ್ರಗೊಳಿಸುವುದು, ಅದರ ಭಾಗವಾಗಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಇದಲ್ಲದೆ, ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವರ ಜೊತೆ ಟೋಲ್ ಕೇಂದ್ರ ತೆರವುಗೊಳಿಸುವ ಕುರಿತು ನಡೆಸಿದ ಮಾತುಕತೆಗಳು ಫಲಪ್ರದ ಆಗಲ್ಲ. ಈವರಗೆ ತಾತ್ಕಾಲಿಕ ನೆಲೆಯಲ್ಲಿ ಮೂರು ತಿಂಗಳಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡುತ್ತಿದ್ದರೆ, ಈ ಬಾರಿ ಒಂದು ವರ್ಷದ ಅವಧಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ನವೀಕರಣ, ಟೆಂಡರ್ ಪ್ರಕ್ರಿಯೆ ಜನವರಿ ತಿಂಗಳಲ್ಲಿ ನಡೆಯುವ ಮಾಹಿತಿ ಇದ್ದರೂ, ಸಂಸದರು ನಿರ್ಲಕ್ಷ್ಯ ವಹಿಸಿದ್ದಾರೆ. ಈ ನಡುವೆ, ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿರುವುದು, ತಾತ್ಕಾಲಿಕ ಟೋಲ್ ಗೇಟ್ ತೆರವಿನ ಕುರಿತು ಹೇಳಿಕೆ ನೀಡಿರುವುದು ಜನತೆಯನ್ನು ದಿಕ್ಕುತಪ್ಪಿಸುವ ಯತ್ನ ಅಷ್ಟೇ. ಸರಣಿ ಹೋರಾಟಗಳಿಂದಷ್ಟೆ ಟೋಲ್ ಗೇಟ್ ತೆರವು ಸಾಧ್ಯ ಎಂದು ಸಭೆಯಲ್ಲಿ ನಿರ್ಣಯಿಸಲಾಯ್ತು.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಮುಲ್ಕಿ ಅಭಿವೃದ್ದಿ ನಾಗರಿಕ ಸಮಿತಿಯ ಅಧ್ಯಕ್ಷ ಹರೀಶ್ ಪುತ್ರನ್, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ವಿವಿಧ ಸಂಘಟನೆಗಳ ಮುಖಂಡರಾದ ವಸಂತ ಬರ್ನಾಡ್, ಧನಂಜಯ ಮಟ್ಟು, ಶ್ರೀನಾಥ್ ಕುಲಾಲ್, ಅಶ್ರಫ್ ಸಫಾ, ಅದ್ದಿ ಬೊಳ್ಳೂರು, ಗ್ರಾಪಂ ಸದಸ್ಯರಾದ ಅಬ್ದುಲ್ ಖಾದರ್ ಹಳೆಯಂಗಡಿ, ಧನರಾಜ್ ಸಸಿಹಿತ್ಲು ಮತ್ತಿತರರು ಉಪಸ್ಥಿತರಿದ್ದರು.
Surathkal Toll Gate gets another year contract by State BJP president Naleen Kumar Kateel amid protest and opposition by localities and organisations.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am