ಬ್ರೇಕಿಂಗ್ ನ್ಯೂಸ್
15-02-21 06:09 pm Mangalore Correspondent ಕರಾವಳಿ
ಮಂಗಳೂರು, ಫೆ.15: ಸುರತ್ಕಲ್ (ಎನ್ಐಟಿಕೆ) ಟೋಲ್ ಕೇಂದ್ರದಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುತ್ತಾರೆಂಬ ನೆಲೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಹಾಗೂ ಮುಲ್ಕಿ ನಾಗರಿಕ ಅಭಿವೃದ್ದಿ ಸಮಿತಿಯ ಮುಖಂಡರು ಸುರತ್ಕಲ್ ಟೋಲ್ ಕೇಂದ್ರದಲ್ಲಿ ಬೆಳಗ್ಗಿನಿಂದಲೇ ಜಮಾಯಿಸಿದ್ದರು. ಈ ವೇಳೆ, ಟೋಲ್ ಸಂಗ್ರಹ ಗುತ್ತಿಗೆದಾರರ ಪ್ರತಿನಿಧಿಗಳು, ಸ್ಥಳೀಯರ ವಾಹನಗಳ ರಿಯಾಯ್ತಿಯನ್ನು ರದ್ದುಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅಂತಹ ಸೂಚನೆಯೇ ಸಂಬಂಧಪಟ್ಟ ಅಧಿಕಾರಿಗಳಿಂದ ಬಂದಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೆ, ಸ್ಥಳೀಯ ವಾಹನಗಳು ಸಂಚರಿಸುವ ಪಥವನ್ನು ಫಾಸ್ಟ್ ಟ್ಯಾಗ್ ಮುಕ್ತವನ್ನಾಗಿಯೇ ಸದ್ಯಕ್ಕೆ ಮುಂದುವರಿಸಲಾಗುವುದು ಎಂದು ಗುತ್ತಿಗೆದಾರರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಅಲ್ಲಿ ಸೇರಿದ್ದ ಸಂಘಟನೆಗಳ ಪ್ರಮುಖರು ಸಭೆ ನಡೆಸಿದ್ದು, ಸ್ಥಳೀಯ ವಾಹನಗಳ ಉಚಿತ ಪ್ರಯಾಣಕ್ಕೆ ಭರವಸೆ ನೀಡಿರುವುದರಿಂದ ಸದ್ಯ ಪ್ರತಿಭಟನೆ ನಡೆಸದಿರಲು ನಿರ್ಧರಿಸಿದ್ದಾರೆ. ಒಂದ್ವೇಳೆ ದಿಢೀರ್ ಶುಲ್ಕ ವಿಧಿಸಿದರೆ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದರು.


ಇದೇ ವೇಳೆ, ಸುರತ್ಕಲ್ ಟೋಲ್ ಕೇಂದ್ರವನ್ನು ಅಲ್ಲಿಂದ ತೆರವುಗೊಳಿಸುವ ಹೋರಾಟವನ್ನು ತೀವ್ರಗೊಳಿಸುವುದು, ಅದರ ಭಾಗವಾಗಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಇದಲ್ಲದೆ, ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವರ ಜೊತೆ ಟೋಲ್ ಕೇಂದ್ರ ತೆರವುಗೊಳಿಸುವ ಕುರಿತು ನಡೆಸಿದ ಮಾತುಕತೆಗಳು ಫಲಪ್ರದ ಆಗಲ್ಲ. ಈವರಗೆ ತಾತ್ಕಾಲಿಕ ನೆಲೆಯಲ್ಲಿ ಮೂರು ತಿಂಗಳಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡುತ್ತಿದ್ದರೆ, ಈ ಬಾರಿ ಒಂದು ವರ್ಷದ ಅವಧಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ನವೀಕರಣ, ಟೆಂಡರ್ ಪ್ರಕ್ರಿಯೆ ಜನವರಿ ತಿಂಗಳಲ್ಲಿ ನಡೆಯುವ ಮಾಹಿತಿ ಇದ್ದರೂ, ಸಂಸದರು ನಿರ್ಲಕ್ಷ್ಯ ವಹಿಸಿದ್ದಾರೆ. ಈ ನಡುವೆ, ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿರುವುದು, ತಾತ್ಕಾಲಿಕ ಟೋಲ್ ಗೇಟ್ ತೆರವಿನ ಕುರಿತು ಹೇಳಿಕೆ ನೀಡಿರುವುದು ಜನತೆಯನ್ನು ದಿಕ್ಕುತಪ್ಪಿಸುವ ಯತ್ನ ಅಷ್ಟೇ. ಸರಣಿ ಹೋರಾಟಗಳಿಂದಷ್ಟೆ ಟೋಲ್ ಗೇಟ್ ತೆರವು ಸಾಧ್ಯ ಎಂದು ಸಭೆಯಲ್ಲಿ ನಿರ್ಣಯಿಸಲಾಯ್ತು.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಮುಲ್ಕಿ ಅಭಿವೃದ್ದಿ ನಾಗರಿಕ ಸಮಿತಿಯ ಅಧ್ಯಕ್ಷ ಹರೀಶ್ ಪುತ್ರನ್, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ವಿವಿಧ ಸಂಘಟನೆಗಳ ಮುಖಂಡರಾದ ವಸಂತ ಬರ್ನಾಡ್, ಧನಂಜಯ ಮಟ್ಟು, ಶ್ರೀನಾಥ್ ಕುಲಾಲ್, ಅಶ್ರಫ್ ಸಫಾ, ಅದ್ದಿ ಬೊಳ್ಳೂರು, ಗ್ರಾಪಂ ಸದಸ್ಯರಾದ ಅಬ್ದುಲ್ ಖಾದರ್ ಹಳೆಯಂಗಡಿ, ಧನರಾಜ್ ಸಸಿಹಿತ್ಲು ಮತ್ತಿತರರು ಉಪಸ್ಥಿತರಿದ್ದರು.
Surathkal Toll Gate gets another year contract by State BJP president Naleen Kumar Kateel amid protest and opposition by localities and organisations.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm