ಬ್ರೇಕಿಂಗ್ ನ್ಯೂಸ್
16-08-20 07:41 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 16: ಕರಾವಳಿಯಲ್ಲಿ ಗಣೇಶೋತ್ಸವ ಅಂದರೆ ಅದು ಸಾರ್ವಜನಿಕರ ಹಬ್ಬ. ಹಿಂದು - ಮುಸ್ಲಿಂ ಭೇದ ಇಲ್ಲದೆ ವಿಜೃಂಭಿಸುವ ಹಬ್ಬವೂ ಹೌದು. ಎಲ್ಲರಿಗೂ ವ್ಯಾಪಾರ, ಆದಾಯ ತರುವ ಹಬ್ಬವೂ ಹೌದು. ಆದರೆ, ಈ ಬಾರಿ ಮಾತ್ರ ಕೊರೊನಾ ಪೀಡೆ ಎಲ್ಲವನ್ನೂ ತಿಂದು ಹಾಕಿದೆ. ಗಣೇಶನ ಹಬ್ಬಕ್ಕೂ ಜನರು ಸಾರ್ವಜನಿಕವಾಗಿ ಉತ್ಸವ ನಡೆಸಲು ರಾಜ್ಯ ಸರಕಾರ ಆಸ್ಪದ ಕೊಟ್ಟಿಲ್ಲ.
ಈಗ ಬಹುತೇಕ ವ್ಯಾಪಾರ ವಹಿವಾಟು ತೆರೆದುಕೊಂಡಿದ್ದರೂ, ಶಿಕ್ಷಣ ಸಂಸ್ಥೆಗಳು ಮತ್ತು ಧಾರ್ಮಿಕ ಸಂಸ್ಥೆಗಳ ಮೇಲಿನ ನಿರ್ಬಂಧ ಮುಂದುವರಿದಿದೆ. ಆಗಸ್ಟ್ 31ರ ವರೆಗೂ ಅನ್ ಲಾಕ್ - 3 ನಿರ್ಬಂಧ ಇರುವುದರಿಂದ ಅಲ್ಲೀ ವರೆಗೂ ಯಾವುದೇ ಹಬ್ಬ ಸಾರ್ವಜನಿಕ ಆಚರಿಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರ ಹೇಳ್ತಾ ಇದೆ. ಆದರೆ, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಣೇಶನ ಹಬ್ಬ ಸ್ವಾತಂತ್ರ್ಯ ಸಿಗುವುದಕ್ಕೂ ಮೊದಲೇ ಸಾರ್ವಜನಿಕ ಗಣೇಶೋತ್ಸವ ಆಗಿ ಆಚರಿಸಿಕೊಂಡು ಬಂದ ಹಿನ್ನೆಲೆ ಹೊಂದಿದೆ. ಹೀಗಾಗಿ ಭಾವನಾತ್ಮಕ ನೆಲೆಯಲ್ಲಿ ಬೆಸೆದುಕೊಂಡಿರುವ ಗಣೇಶನ ಹಬ್ಬ ಆಚರಿಸದೆ ನಿಲ್ಲಿಸುವುದು ಈ ಭಾಗದ ಮಂದಿಗೆ ಸಾಧ್ಯವೇ ಇಲ್ಲ ಎನ್ನುವಂಥ ಸ್ಥಿತಿ. ಆದರೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತೊಮ್ಮೆ ಸಾರ್ವಜನಿಕ ಗಣೇಶೋತ್ಸವ ಕಟ್ಟುನಿಟ್ಟಾಗಿ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಸಂಸದರು, ಶಾಸಕರಲ್ಲಿ ಒಂದು ದಿನವಾದ್ರೂ ಗಣೇಶನ ಪೂಜೆಗೆ ಅವಕಾಶ ಕೊಡಿ ಎಂದು ಈ ಭಾಗದ ಗಣೇಶೋತ್ಸವ ಸಮಿತಿಗಳು ಮನವಿ ಮಾಡಿವೆ. ಜಿಲ್ಲಾಡಳಿತಕ್ಕೂ ಅಂಥದ್ದೇ ಮನವಿಯನ್ನು ಮುಂದಿಟ್ಟಿದ್ದವು. ರಿಯಾಯ್ತಿ ಕೊಡಬಹುದು ಎಂಬ ನಿರೀಕ್ಷೆ ಇತ್ತಾದರೂ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಖಡಕ್ ಆದೇಶ ನೀಡಿರುವುದು ನಿರಾಸೆ ಮೂಡಿಸಿದೆ.


ದೇವಸ್ಥಾನ, ಮನೆಗಳಲ್ಲಿ ಗಣೇಶೋತ್ಸವ ಆಚರಣೆ ಮಾಡಬಹುದು. ಆದರೆ ಯಾವುದೇ ಬೀದಿ, ರಸ್ತೆ , ಮೈದಾನದಲ್ಲಿ ಗಣೇಶನ ಪೂಜೆ ಮಾಡುವಂತಿಲ್ಲ. ಗಣೇಶನ ವಿಸರ್ಜನೆಯ ಸಂದರ್ಭದಲ್ಲಿಯೂ ಮೆರವಣಿಗೆ ನಡೆಸುವಂತಿಲ್ಲ. ಆಯಾ ದೇವಸ್ಥಾನದ ಕೆರೆಗಳಲ್ಲಿ ಮತ್ತು ಮನೆಗಳ ಬಾವಿಯಲ್ಲೇ ಗಣೇಶನ ಮೂರ್ತಿ ವಿಸರ್ಜನೆ ಮಾಡುವಂತೆ ನಿರ್ದೇಶನ ನೀಡಲಾಗಿದೆ.
ಹೀಗಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ಒಂದು ದಿನ ಗಣೇಶನ ಪೂಜೆಯನ್ನು ಮಾಡುವುದಕ್ಕೂ ಆಸ್ಪದ ಇಲ್ಲದಂತಾಗಿದೆ. ಅಲ್ಲದೆ, ನೂರು ವರ್ಷಗಳಿಂದಲೂ ಗಣೇಶನ ಪೂಜೆ ನಡೆಸಿಕೊಂಡು ಬಂದವರು ಈಗ ಚಿಂತೆಗೆ ಒಳಗಾಗಿದ್ದಾರೆ. ಹಿಂದು ಪರ ಪೋಸು ನೀಡುವ ಬಿಜೆಪಿ ಆಡಳಿತದಲ್ಲಿದ್ದರೂ ಸರಕಾರ ಗಣೇಶೋತ್ಸವಕ್ಕೆ ಅವಕಾಶ ನೀಡದಿರುವುದು ಕೆಲವು ಹಿಂದು ಸಂಘಟನೆಗಳ ಆಕ್ರೋಶಕ್ಕೂ ಕಾರಣವಾಗಿದೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm