ಬ್ರೇಕಿಂಗ್ ನ್ಯೂಸ್
16-02-21 07:30 pm Mangaluru Correspondent ಕರಾವಳಿ
ಕುಂದಾಪುರ, ಫೆ.15: ಫಾಸ್ಟ್ಯಾಗ್ ಕಡ್ಡಾಯ ಕ್ರಮದಿಂದಾಗಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಾಸ್ತಾನದ ಟೋಲ್ ಗೇಟಿನಲ್ಲಿ ಸ್ಥಳೀಯರಿಗೂ ಶುಲ್ಕ ವಿಧಿಸಲಾಗುತ್ತಿದ್ದು ಇದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸ್ಥಳೀಯರು ಟೋಲ್ ಗೇಟಿನ ಮುಂದೆ ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡ ಇಟ್ಟು ಧರಣಿ ಕುಳಿತು ನವಯುಗ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ್ ಮಾತನಾಡಿ, ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಸಾಸ್ತಾನ ಟೋಲ್ ಗೇಟಿಗೆ ಹಿಂದಿನಂತೆ ಯಾವುದೇ ಟೋಲ್ ನೀಡದೆ ಕರ ನಿರಾಕರಣೆ ಚಳವಳಿ ಮುಂದಾಗಬೇಕು ಎಂದು ಕರೆ ನೀಡಿದರು.

ಹೆದ್ದಾರಿ ಹೋರಾಟ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ಸ್ಥಳೀಯರಿಗೆ ಟೋಲ್ ನಿಂದ ವಿನಾಯಿತಿ ನೀಡುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು. ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್., ಬ್ರಹ್ಮಾವರ ವೃತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಕೋಟ ಎಸ್ಸೈ ಸಂತೋಷ್ ಬಿ.ಪಿ. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಪ್ರತಿಭಟನಾಕಾರರು ಮಣಿಯಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸಮಯಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಪ್ರತಿಭಟನಾಕಾರರ ಪ್ರತಿಭಟನೆ ಹಿಂಪಡೆದರು.
Members of Tollgate Virodhi Horata Samithi of Surathkal and Mulki Nagarika Abhivridhi Samithi have decided to intensify their protest against the toll plaza at Surathkal.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am