ಬ್ರೇಕಿಂಗ್ ನ್ಯೂಸ್
16-02-21 07:30 pm Mangaluru Correspondent ಕರಾವಳಿ
ಕುಂದಾಪುರ, ಫೆ.15: ಫಾಸ್ಟ್ಯಾಗ್ ಕಡ್ಡಾಯ ಕ್ರಮದಿಂದಾಗಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಾಸ್ತಾನದ ಟೋಲ್ ಗೇಟಿನಲ್ಲಿ ಸ್ಥಳೀಯರಿಗೂ ಶುಲ್ಕ ವಿಧಿಸಲಾಗುತ್ತಿದ್ದು ಇದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸ್ಥಳೀಯರು ಟೋಲ್ ಗೇಟಿನ ಮುಂದೆ ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡ ಇಟ್ಟು ಧರಣಿ ಕುಳಿತು ನವಯುಗ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ್ ಮಾತನಾಡಿ, ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಸಾಸ್ತಾನ ಟೋಲ್ ಗೇಟಿಗೆ ಹಿಂದಿನಂತೆ ಯಾವುದೇ ಟೋಲ್ ನೀಡದೆ ಕರ ನಿರಾಕರಣೆ ಚಳವಳಿ ಮುಂದಾಗಬೇಕು ಎಂದು ಕರೆ ನೀಡಿದರು.

ಹೆದ್ದಾರಿ ಹೋರಾಟ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ಸ್ಥಳೀಯರಿಗೆ ಟೋಲ್ ನಿಂದ ವಿನಾಯಿತಿ ನೀಡುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು. ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್., ಬ್ರಹ್ಮಾವರ ವೃತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಕೋಟ ಎಸ್ಸೈ ಸಂತೋಷ್ ಬಿ.ಪಿ. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಪ್ರತಿಭಟನಾಕಾರರು ಮಣಿಯಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸಮಯಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಪ್ರತಿಭಟನಾಕಾರರ ಪ್ರತಿಭಟನೆ ಹಿಂಪಡೆದರು.
Members of Tollgate Virodhi Horata Samithi of Surathkal and Mulki Nagarika Abhivridhi Samithi have decided to intensify their protest against the toll plaza at Surathkal.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am