ಬ್ರೇಕಿಂಗ್ ನ್ಯೂಸ್
18-02-21 11:27 am Mangaluru Correspondent ಕರಾವಳಿ
ಮಂಗಳೂರು, ಫೆ.18: ಮಂಗಳೂರಿನಲ್ಲಿ ಎರಡನೇ ದಿನವೂ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದೆ. ನಿನ್ನೆ ರಾತ್ರಿಯೂ ನಿರಂತರವಾಗಿ ಅಧಿಕಾರಿಗಳು ನಿದ್ದೆಯಿಲ್ಲದೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಗಳೂರಿನ ನಾಲ್ಕು ಪ್ರತಿಷ್ಟಿತ ಆಸ್ಪತ್ರೆ ಹಾಗು ಮೆಡಿಕಲ್ ಕಾಲೇಜುಗಳ ಮಾಲೀಕರನ್ನು ಗುರಿಯಾಗಿಸಿ ದಾಳಿ ನಡೆದಿದ್ದು ಅಧಿಕಾರಿಗಳು ಮಹತ್ವದ ದಾಖಲೆ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನಪೋಯ, ಕಣಚೂರು, ಶ್ರೀನಿವಾಸ್, ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಐಟಿ ಅಧಿಕಾರಿಗಳು ನಾಲ್ಕು ದಿನಗಳಿಗಾಗಿ ಸ್ಥಳೀಯ ಕಾರುಗಳನ್ನು ಬಾಡಿಗೆಗೆ ಪಡೆದಿದ್ದು ಈ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿಗಳನ್ನು ಖಚಿತಪಡಿಸಿಕೊಂಡೇ ದಾಳಿ ನಡೆಸಿರುವ ಸಾಧ್ಯತೆಯಿದೆ. ರಾತ್ರಿಯೂ ನಿರಂತರವಾಗಿ ಪರಿಶೀಲನೆಯಲ್ಲಿ ತೊಡಗಿದ್ದರಿಂದ ಆದಾಯ ತೆರಿಗೆ ವಂಚನೆಯಲ್ಲಿ ಖಚಿತ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗುತ್ತಿದೆ. 200 ಕ್ಕೂ ಅಧಿಕ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದು ಮಂಗಳೂರಿನ ವಿವಿಧೆಡೆಗಳಲ್ಲಿ ರಹಸ್ಯವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ದಾಳಿಗೆ ಒಳಗಾಗಿರುವ ನಾಲ್ಕು ಸಂಸ್ಥೆಗಳು ಕುಟುಂಬ ಒಡೆತನಕ್ಕೆ ಸೇರಿದವು. ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದು ಸಂಸ್ಥೆ ನಡೆಸುತ್ತಿದ್ದಾರೆ. ಇವರನ್ನು ಎರಡು ದಿನಗಳಿಂದ ಮನೆಯಲ್ಲೇ ಇರಿಸಿಕೊಂಡು ಪ್ರಶ್ನೆ ಮುಂದಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ತಾವು ಇದ್ದಲ್ಲಿಗೇ ಊಟ, ತಿಂಡಿ ತರಿಸಿಕೊಂಡು ಅಲ್ಲೇ ಸರದಿಯಂತೆ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ, ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಜೊತೆಗಿದ್ದು ಒಟ್ಟು ಆದಾಯ, ಆದಾಯ ತೆರಿಗೆ, ಜಿಎಸ್ಟಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
The Income-tax raid on four Medical colleges in Mangalore continues for the second day on the owners' house, institutions and their properties. The income tax dep raided on 17th Feb, 20201 early morning.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am