ಬ್ರೇಕಿಂಗ್ ನ್ಯೂಸ್
18-02-21 11:27 am Mangaluru Correspondent ಕರಾವಳಿ
ಮಂಗಳೂರು, ಫೆ.18: ಮಂಗಳೂರಿನಲ್ಲಿ ಎರಡನೇ ದಿನವೂ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದೆ. ನಿನ್ನೆ ರಾತ್ರಿಯೂ ನಿರಂತರವಾಗಿ ಅಧಿಕಾರಿಗಳು ನಿದ್ದೆಯಿಲ್ಲದೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಗಳೂರಿನ ನಾಲ್ಕು ಪ್ರತಿಷ್ಟಿತ ಆಸ್ಪತ್ರೆ ಹಾಗು ಮೆಡಿಕಲ್ ಕಾಲೇಜುಗಳ ಮಾಲೀಕರನ್ನು ಗುರಿಯಾಗಿಸಿ ದಾಳಿ ನಡೆದಿದ್ದು ಅಧಿಕಾರಿಗಳು ಮಹತ್ವದ ದಾಖಲೆ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನಪೋಯ, ಕಣಚೂರು, ಶ್ರೀನಿವಾಸ್, ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಐಟಿ ಅಧಿಕಾರಿಗಳು ನಾಲ್ಕು ದಿನಗಳಿಗಾಗಿ ಸ್ಥಳೀಯ ಕಾರುಗಳನ್ನು ಬಾಡಿಗೆಗೆ ಪಡೆದಿದ್ದು ಈ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿಗಳನ್ನು ಖಚಿತಪಡಿಸಿಕೊಂಡೇ ದಾಳಿ ನಡೆಸಿರುವ ಸಾಧ್ಯತೆಯಿದೆ. ರಾತ್ರಿಯೂ ನಿರಂತರವಾಗಿ ಪರಿಶೀಲನೆಯಲ್ಲಿ ತೊಡಗಿದ್ದರಿಂದ ಆದಾಯ ತೆರಿಗೆ ವಂಚನೆಯಲ್ಲಿ ಖಚಿತ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗುತ್ತಿದೆ. 200 ಕ್ಕೂ ಅಧಿಕ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದು ಮಂಗಳೂರಿನ ವಿವಿಧೆಡೆಗಳಲ್ಲಿ ರಹಸ್ಯವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ದಾಳಿಗೆ ಒಳಗಾಗಿರುವ ನಾಲ್ಕು ಸಂಸ್ಥೆಗಳು ಕುಟುಂಬ ಒಡೆತನಕ್ಕೆ ಸೇರಿದವು. ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದು ಸಂಸ್ಥೆ ನಡೆಸುತ್ತಿದ್ದಾರೆ. ಇವರನ್ನು ಎರಡು ದಿನಗಳಿಂದ ಮನೆಯಲ್ಲೇ ಇರಿಸಿಕೊಂಡು ಪ್ರಶ್ನೆ ಮುಂದಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ತಾವು ಇದ್ದಲ್ಲಿಗೇ ಊಟ, ತಿಂಡಿ ತರಿಸಿಕೊಂಡು ಅಲ್ಲೇ ಸರದಿಯಂತೆ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ, ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಜೊತೆಗಿದ್ದು ಒಟ್ಟು ಆದಾಯ, ಆದಾಯ ತೆರಿಗೆ, ಜಿಎಸ್ಟಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
The Income-tax raid on four Medical colleges in Mangalore continues for the second day on the owners' house, institutions and their properties. The income tax dep raided on 17th Feb, 20201 early morning.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm