ಬ್ರೇಕಿಂಗ್ ನ್ಯೂಸ್
18-02-21 07:50 pm Mangaluru Correspondent ಕರಾವಳಿ
ಪುತ್ತೂರು, ಫೆ.18: ಬ್ಯಾಂಕ್ ಸಾಲ ಕಟ್ಟದ ಕಾರಣ ಮನೆ ಮುಟ್ಟುಗೋಲು ಹಾಕಲು ಬಂದ ಬ್ಯಾಂಕ್ ಸಿಬಂದಿ ಎದುರಲ್ಲೇ ಮನೆ ಮಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದಲ್ಲಿ ಗುರುವಾರ ನಡೆದಿದೆ.
ಪುತ್ತೂರಿನ ಹಾರಾಡಿ ರೈಲ್ವೇ ರಸ್ತೆಯ ನಿವಾಸಿ ಉದ್ಯಮಿ ರಘುವೀರ್ ಪ್ರಭು ಎಂಬವರ ಪತ್ನಿ ಪ್ರಾರ್ಥನಾ ಪ್ರಭು (52) ಆತ್ಮಹತ್ಯೆ ಮಾಡಿಕೊಂಡವರು.

ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿದ್ದು, ಸಾಲ ಮರುಪಾವತಿ ಮಾಡದ ಕಾರಣಕ್ಕೆ ಬ್ಯಾಂಕ್ ನೋಟೀಸ್ ಬಂದಿತ್ತು. ಬಳಿಕ ಕೋರ್ಟ್ ನೋಟೀಸ್ ಹೊರಡಿದ್ದು ಮನೆ ಮುಟ್ಟುಗೋಲು ಹಾಕಲು ಗುರುವಾರ ಬ್ಯಾಂಕ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಮನೆ ಮಂದಿ ಆತಂಕಕ್ಕೊಳಾಗಿದ್ದರು. ಇದೇ ವೇಳೆ ಮನೆಯೊಳಗಿದ್ದ ಪ್ರಾರ್ಥನಾ ಪ್ರಭು ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಘುವೀರ ಪ್ರಭು ಕೆನರಾ ಬ್ಯಾಂಕ್ನಲ್ಲಿ ಸಾಲ ಹೊಂದಿದ್ದು ಕೋರ್ಟು ಆದೇಶದೊಂದಿಗೆ ಅಧಿಕಾರಿಗಳು ಮನೆ ಮುಟ್ಟುಗೋಲಿಗೆ ಬಂದಿದ್ದರು. ಈ ಸಂದರ್ಭ ಮುಟ್ಟುಗೋಲಿಗೆ ಭದ್ರತೆ ಒದಗಿಸಲು ಬಂದಿದ್ದ ಪೊಲೀಸರು ನೇಣು ಬಿಗಿದ ಸ್ಥಿತಿಯಲ್ಲಿದ್ದ ಪ್ರಾರ್ಥನಾ ಪ್ರಭು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಆದರೆ ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಘಟನಾ ಸ್ಥಳಕ್ಕೆ ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಜಂಬುರಾಜ್ ಮಹಾಜ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ರಾಧಾಕೃಷ್ಣ ಭಕ್ತ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಸಚಿನ್ ಶೆಣೈ, ಸದಾಶಿವ ಪೈ ಮತ್ತಿತರರು ಆಗಮಿಸಿ ಬ್ಯಾಂಕ್ ಅಧಿಕಾರಿಗಳ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರು.
ಘಟನೆಯ ಕುರಿತು ಮೃತರ ಪತಿ ರಘುವೀರ್ ಪ್ರಭು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A woman in puttur ended her life after bank officials came to vacate their house over the repayment of a loan.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm