ಬ್ರೇಕಿಂಗ್ ನ್ಯೂಸ್
18-02-21 07:50 pm Mangaluru Correspondent ಕರಾವಳಿ
ಪುತ್ತೂರು, ಫೆ.18: ಬ್ಯಾಂಕ್ ಸಾಲ ಕಟ್ಟದ ಕಾರಣ ಮನೆ ಮುಟ್ಟುಗೋಲು ಹಾಕಲು ಬಂದ ಬ್ಯಾಂಕ್ ಸಿಬಂದಿ ಎದುರಲ್ಲೇ ಮನೆ ಮಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದಲ್ಲಿ ಗುರುವಾರ ನಡೆದಿದೆ.
ಪುತ್ತೂರಿನ ಹಾರಾಡಿ ರೈಲ್ವೇ ರಸ್ತೆಯ ನಿವಾಸಿ ಉದ್ಯಮಿ ರಘುವೀರ್ ಪ್ರಭು ಎಂಬವರ ಪತ್ನಿ ಪ್ರಾರ್ಥನಾ ಪ್ರಭು (52) ಆತ್ಮಹತ್ಯೆ ಮಾಡಿಕೊಂಡವರು.

ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿದ್ದು, ಸಾಲ ಮರುಪಾವತಿ ಮಾಡದ ಕಾರಣಕ್ಕೆ ಬ್ಯಾಂಕ್ ನೋಟೀಸ್ ಬಂದಿತ್ತು. ಬಳಿಕ ಕೋರ್ಟ್ ನೋಟೀಸ್ ಹೊರಡಿದ್ದು ಮನೆ ಮುಟ್ಟುಗೋಲು ಹಾಕಲು ಗುರುವಾರ ಬ್ಯಾಂಕ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಮನೆ ಮಂದಿ ಆತಂಕಕ್ಕೊಳಾಗಿದ್ದರು. ಇದೇ ವೇಳೆ ಮನೆಯೊಳಗಿದ್ದ ಪ್ರಾರ್ಥನಾ ಪ್ರಭು ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಘುವೀರ ಪ್ರಭು ಕೆನರಾ ಬ್ಯಾಂಕ್ನಲ್ಲಿ ಸಾಲ ಹೊಂದಿದ್ದು ಕೋರ್ಟು ಆದೇಶದೊಂದಿಗೆ ಅಧಿಕಾರಿಗಳು ಮನೆ ಮುಟ್ಟುಗೋಲಿಗೆ ಬಂದಿದ್ದರು. ಈ ಸಂದರ್ಭ ಮುಟ್ಟುಗೋಲಿಗೆ ಭದ್ರತೆ ಒದಗಿಸಲು ಬಂದಿದ್ದ ಪೊಲೀಸರು ನೇಣು ಬಿಗಿದ ಸ್ಥಿತಿಯಲ್ಲಿದ್ದ ಪ್ರಾರ್ಥನಾ ಪ್ರಭು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಆದರೆ ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಘಟನಾ ಸ್ಥಳಕ್ಕೆ ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಜಂಬುರಾಜ್ ಮಹಾಜ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ರಾಧಾಕೃಷ್ಣ ಭಕ್ತ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಸಚಿನ್ ಶೆಣೈ, ಸದಾಶಿವ ಪೈ ಮತ್ತಿತರರು ಆಗಮಿಸಿ ಬ್ಯಾಂಕ್ ಅಧಿಕಾರಿಗಳ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರು.
ಘಟನೆಯ ಕುರಿತು ಮೃತರ ಪತಿ ರಘುವೀರ್ ಪ್ರಭು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A woman in puttur ended her life after bank officials came to vacate their house over the repayment of a loan.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm