ಬ್ರೇಕಿಂಗ್ ನ್ಯೂಸ್
18-02-21 07:50 pm Mangaluru Correspondent ಕರಾವಳಿ
ಪುತ್ತೂರು, ಫೆ.18: ಬ್ಯಾಂಕ್ ಸಾಲ ಕಟ್ಟದ ಕಾರಣ ಮನೆ ಮುಟ್ಟುಗೋಲು ಹಾಕಲು ಬಂದ ಬ್ಯಾಂಕ್ ಸಿಬಂದಿ ಎದುರಲ್ಲೇ ಮನೆ ಮಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದಲ್ಲಿ ಗುರುವಾರ ನಡೆದಿದೆ.
ಪುತ್ತೂರಿನ ಹಾರಾಡಿ ರೈಲ್ವೇ ರಸ್ತೆಯ ನಿವಾಸಿ ಉದ್ಯಮಿ ರಘುವೀರ್ ಪ್ರಭು ಎಂಬವರ ಪತ್ನಿ ಪ್ರಾರ್ಥನಾ ಪ್ರಭು (52) ಆತ್ಮಹತ್ಯೆ ಮಾಡಿಕೊಂಡವರು.
ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿದ್ದು, ಸಾಲ ಮರುಪಾವತಿ ಮಾಡದ ಕಾರಣಕ್ಕೆ ಬ್ಯಾಂಕ್ ನೋಟೀಸ್ ಬಂದಿತ್ತು. ಬಳಿಕ ಕೋರ್ಟ್ ನೋಟೀಸ್ ಹೊರಡಿದ್ದು ಮನೆ ಮುಟ್ಟುಗೋಲು ಹಾಕಲು ಗುರುವಾರ ಬ್ಯಾಂಕ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಮನೆ ಮಂದಿ ಆತಂಕಕ್ಕೊಳಾಗಿದ್ದರು. ಇದೇ ವೇಳೆ ಮನೆಯೊಳಗಿದ್ದ ಪ್ರಾರ್ಥನಾ ಪ್ರಭು ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಘುವೀರ ಪ್ರಭು ಕೆನರಾ ಬ್ಯಾಂಕ್ನಲ್ಲಿ ಸಾಲ ಹೊಂದಿದ್ದು ಕೋರ್ಟು ಆದೇಶದೊಂದಿಗೆ ಅಧಿಕಾರಿಗಳು ಮನೆ ಮುಟ್ಟುಗೋಲಿಗೆ ಬಂದಿದ್ದರು. ಈ ಸಂದರ್ಭ ಮುಟ್ಟುಗೋಲಿಗೆ ಭದ್ರತೆ ಒದಗಿಸಲು ಬಂದಿದ್ದ ಪೊಲೀಸರು ನೇಣು ಬಿಗಿದ ಸ್ಥಿತಿಯಲ್ಲಿದ್ದ ಪ್ರಾರ್ಥನಾ ಪ್ರಭು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಆದರೆ ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಘಟನಾ ಸ್ಥಳಕ್ಕೆ ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಜಂಬುರಾಜ್ ಮಹಾಜ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ರಾಧಾಕೃಷ್ಣ ಭಕ್ತ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಸಚಿನ್ ಶೆಣೈ, ಸದಾಶಿವ ಪೈ ಮತ್ತಿತರರು ಆಗಮಿಸಿ ಬ್ಯಾಂಕ್ ಅಧಿಕಾರಿಗಳ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರು.
ಘಟನೆಯ ಕುರಿತು ಮೃತರ ಪತಿ ರಘುವೀರ್ ಪ್ರಭು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A woman in puttur ended her life after bank officials came to vacate their house over the repayment of a loan.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm