ಬ್ರೇಕಿಂಗ್ ನ್ಯೂಸ್
19-02-21 10:58 am Mangalore Correspondent ಕರಾವಳಿ
ಪುತ್ತೂರು, ಫೆ.19: ರಂಗಸ್ಥಳದ ಸಿಡಿಲಮರಿ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪುರಸ್ಕೃತ ಪುತ್ತೂರು ಶ್ರೀಧರ ಭಂಡಾರಿ (73) ಇಂದು ಮುಂಜಾನೆ ನಿಧನರಾಗಿದ್ದಾರೆ. ತೆಂಕು ತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಸುದೀರ್ಘ ಆರು ದಶಕಗಳ ಕಾಲ ಸೇವೆ ಸಲ್ಲಿಸಿ, ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದ್ದರು.

ಅವರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಯಕ್ಷಾಭಿಮಾನಿಗಳನ್ನು ಅಗಲಿದ್ದಾರೆ. ತಮ್ಮ 12ನೇ ವಯಸ್ಸಿನಲ್ಲೇ ಯಕ್ಷಗಾನ ಕಲಿತು, 15ನೇ ವಯಸ್ಸಿನಲ್ಲಿ ರಂಗಸ್ಥಳ ಏರಿದ್ದ ಶ್ರೀಧರ ಭಂಡಾರಿಗೆ ತೆಂಕುತಿಟ್ಟಿನಲ್ಲಿ ಸಾಟಿಯಾಗಬಲ್ಲ ಇನ್ನೊಬ್ಬ ವೇಷಧಾರಿಯೇ ಇರಲಿಲ್ಲ. ನಾಟ್ಯ, ಲಯಬದ್ಧ ಮಾತುಗಾರಿಕೆ, ಇಳಿವಯಸ್ಸಿನಲ್ಲೂ ರಂಗಸ್ಥಳವನ್ನು ಗಿರಗಿಟ್ಟೆ ಮಾಡುವಂತೆ ಕುಣಿಯುತ್ತಿದ್ದ ಛಾತಿ ಭಂಡಾರಿಗೆ ಭಂಡಾರಿಯೇ ಸಾಟಿ. ವಿಶೇಷವಾಗಿ ಅಭಿಮನ್ಯು ಪಾತ್ರಕ್ಕೆ ಯಕ್ಷಗಾನದಲ್ಲಿ ಮಿಂಚು ಹರಿಸಿದ್ದೇ ಭಂಡಾರಿ. ಚಕ್ರವ್ಯೂಹ ಪ್ರಸಂಗದಲ್ಲಿ ಅಭಿಮನ್ಯು ಚಕ್ರವ್ಯೂಹ ಭೇದಿಸುವ ಪರಿಯನ್ನು ಪ್ರೇಕ್ಷಕರಿಗೆ ಮಹಾಭಾರತ ನೋಡಿದ ರೀತಿಯಲ್ಲೇ ಕಟ್ಟಿಕೊಟ್ಟಿದ್ದು ಶ್ರೀಧರ ಭಂಡಾರಿ. ಮೊಣಕಾಲು ಊರಿಕೊಂಡು ಗಿರಗಿಟ್ಟೆ ತಿರುಗುತ್ತಿದ್ದ ಪರಿ ನೋಡುಗರಲ್ಲಿ ಮಿಂಚಿನ ಸಂಚಾರ ಮೂಡಿಸುತ್ತಿತ್ತು. 60ರ ಇಳಿವಯಸ್ಸಲ್ಲೂ ಮೊಣಕಾಲಿನಲ್ಲಿ ತಿರುಗುತ್ತಿದ್ದ ಏಕೈಕ ಪಾತ್ರಧಾರಿಯೂ ಅವರೇ ಆಗಿದ್ದರು.


ಆರಂಭದಲ್ಲಿ ಸುಬ್ರಹ್ಮಣ್ಯ ಮೇಳ, ಬಾಳಂಬೆಟ್ಟು ಮೇಳ, ಪುತ್ತೂರು ಮೇಳಗಳಲ್ಲಿ ಸೇವೆ ಸಲ್ಲಿಸಿದ ಶ್ರೀಧರ ಭಂಡಾರಿ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮೇಳದಲ್ಲಿ ಸುದೀರ್ಘ 45 ವರ್ಷಗಳ ಕಾಲ ಪ್ರಮುಖ ವೇಷಧಾರಿಯಾಗಿ ಗುರುತಿಸಿದ್ದರು.



ಯಕ್ಷಗಾನದ ಸಿಡಿಲಮರಿ, ರಂಗಸ್ಥಳದ ರಾಜ, ಯಕ್ಷನಾಟ್ಯ ಚತುರ, ಶತ ಗಣಗಳ ರಾಜ ಇತ್ಯಾದಿ ಬಿರುದುಗಳನ್ನು ಪಡೆದಿದ್ದ ಇವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿದ್ದವು. ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟಗಳಲ್ಲಿ 150ಕ್ಕಿಂತಲೂ ಹೆಚ್ಚಿನ ಪುರಸ್ಕಾರಗಳನ್ನು ಇವರು ಪಡೆದಿದ್ದರು.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm