ಬ್ರೇಕಿಂಗ್ ನ್ಯೂಸ್
19-02-21 10:58 am Mangalore Correspondent ಕರಾವಳಿ
ಪುತ್ತೂರು, ಫೆ.19: ರಂಗಸ್ಥಳದ ಸಿಡಿಲಮರಿ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪುರಸ್ಕೃತ ಪುತ್ತೂರು ಶ್ರೀಧರ ಭಂಡಾರಿ (73) ಇಂದು ಮುಂಜಾನೆ ನಿಧನರಾಗಿದ್ದಾರೆ. ತೆಂಕು ತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಸುದೀರ್ಘ ಆರು ದಶಕಗಳ ಕಾಲ ಸೇವೆ ಸಲ್ಲಿಸಿ, ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದ್ದರು.

ಅವರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಯಕ್ಷಾಭಿಮಾನಿಗಳನ್ನು ಅಗಲಿದ್ದಾರೆ. ತಮ್ಮ 12ನೇ ವಯಸ್ಸಿನಲ್ಲೇ ಯಕ್ಷಗಾನ ಕಲಿತು, 15ನೇ ವಯಸ್ಸಿನಲ್ಲಿ ರಂಗಸ್ಥಳ ಏರಿದ್ದ ಶ್ರೀಧರ ಭಂಡಾರಿಗೆ ತೆಂಕುತಿಟ್ಟಿನಲ್ಲಿ ಸಾಟಿಯಾಗಬಲ್ಲ ಇನ್ನೊಬ್ಬ ವೇಷಧಾರಿಯೇ ಇರಲಿಲ್ಲ. ನಾಟ್ಯ, ಲಯಬದ್ಧ ಮಾತುಗಾರಿಕೆ, ಇಳಿವಯಸ್ಸಿನಲ್ಲೂ ರಂಗಸ್ಥಳವನ್ನು ಗಿರಗಿಟ್ಟೆ ಮಾಡುವಂತೆ ಕುಣಿಯುತ್ತಿದ್ದ ಛಾತಿ ಭಂಡಾರಿಗೆ ಭಂಡಾರಿಯೇ ಸಾಟಿ. ವಿಶೇಷವಾಗಿ ಅಭಿಮನ್ಯು ಪಾತ್ರಕ್ಕೆ ಯಕ್ಷಗಾನದಲ್ಲಿ ಮಿಂಚು ಹರಿಸಿದ್ದೇ ಭಂಡಾರಿ. ಚಕ್ರವ್ಯೂಹ ಪ್ರಸಂಗದಲ್ಲಿ ಅಭಿಮನ್ಯು ಚಕ್ರವ್ಯೂಹ ಭೇದಿಸುವ ಪರಿಯನ್ನು ಪ್ರೇಕ್ಷಕರಿಗೆ ಮಹಾಭಾರತ ನೋಡಿದ ರೀತಿಯಲ್ಲೇ ಕಟ್ಟಿಕೊಟ್ಟಿದ್ದು ಶ್ರೀಧರ ಭಂಡಾರಿ. ಮೊಣಕಾಲು ಊರಿಕೊಂಡು ಗಿರಗಿಟ್ಟೆ ತಿರುಗುತ್ತಿದ್ದ ಪರಿ ನೋಡುಗರಲ್ಲಿ ಮಿಂಚಿನ ಸಂಚಾರ ಮೂಡಿಸುತ್ತಿತ್ತು. 60ರ ಇಳಿವಯಸ್ಸಲ್ಲೂ ಮೊಣಕಾಲಿನಲ್ಲಿ ತಿರುಗುತ್ತಿದ್ದ ಏಕೈಕ ಪಾತ್ರಧಾರಿಯೂ ಅವರೇ ಆಗಿದ್ದರು.


ಆರಂಭದಲ್ಲಿ ಸುಬ್ರಹ್ಮಣ್ಯ ಮೇಳ, ಬಾಳಂಬೆಟ್ಟು ಮೇಳ, ಪುತ್ತೂರು ಮೇಳಗಳಲ್ಲಿ ಸೇವೆ ಸಲ್ಲಿಸಿದ ಶ್ರೀಧರ ಭಂಡಾರಿ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮೇಳದಲ್ಲಿ ಸುದೀರ್ಘ 45 ವರ್ಷಗಳ ಕಾಲ ಪ್ರಮುಖ ವೇಷಧಾರಿಯಾಗಿ ಗುರುತಿಸಿದ್ದರು.



ಯಕ್ಷಗಾನದ ಸಿಡಿಲಮರಿ, ರಂಗಸ್ಥಳದ ರಾಜ, ಯಕ್ಷನಾಟ್ಯ ಚತುರ, ಶತ ಗಣಗಳ ರಾಜ ಇತ್ಯಾದಿ ಬಿರುದುಗಳನ್ನು ಪಡೆದಿದ್ದ ಇವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿದ್ದವು. ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟಗಳಲ್ಲಿ 150ಕ್ಕಿಂತಲೂ ಹೆಚ್ಚಿನ ಪುರಸ್ಕಾರಗಳನ್ನು ಇವರು ಪಡೆದಿದ್ದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm