ಬ್ರೇಕಿಂಗ್ ನ್ಯೂಸ್
20-02-21 05:42 pm Mangalore Correspondent ಕರಾವಳಿ
ಉಳ್ಳಾಲ: ಫೆ.20 : HLH (Hemophagocyti Lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಏಳು ವರ್ಷದ ಮಗು ತನಿಶ್ ಗಟ್ಟಿಯ ಹೆಚ್ಚಿನ ಚಿಕಿತ್ಸೆಗಾಗಿ 45 ಲಕ್ಷ ರೂಪಾಯಿ ವೆಚ್ಚ ತಗುಲಲಿದ್ದು ವಿಶ್ವ ಹಿಂದು ಪರಿಷತ್, ಬಜರಂಗದದ ವತಿಯಿಂದ ಕುತ್ತಾರು ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ದಿನದಂದು ಸನ್ನಿಧಾನದಲ್ಲಿ ಸಾರ್ವಜನಿಕರಲ್ಲಿ ಭಿಕ್ಷೆ ಎತ್ತಿ 30,000 ನಗದನ್ನು ಕ್ರೋಡೀಕರಿಸಿದೆ.

ಮಂಗಳೂರಿನ ವಿವಿ ಕಾಲೇಜಿನಲ್ಲಿ ಗುತ್ತಿಗೆ ಆಧಾರದಲ್ಲಿ ಸೆಕ್ಯುರಿಟಿ ಕೆಲಸದಲ್ಲಿರುವ ಬಜಾಲ್ ಕಾವು ಬೈಲ್ ನಿವಾಸಿ ನವೀನ್ ಗಟ್ಟಿಯವರ ಏಕೈಕ ಮಗ ತನಿಷ್ ಗಟ್ಟಿ(7) Hemophagocyti Lymphohistocytosis(ಬೆನ್ನು ಮೂಳೆ ಕ್ಯಾನ್ಸರ್) ಎಂಬ ವಿಚಿತ್ರ ಕಾಯಿಲೆಯಿಂದ ನರಳುತ್ತಿದ್ದಾನೆ. ಪ್ರಸ್ತುತ ತನಿಷ್ ಮಂಗಳೂರಿನ K.M.C ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವುದಾಗಿ ಹೇಳಿದ್ದಾರೆ. ಅವರ ನಿರ್ದೇಶನದಂತೆ ಮಗುವನ್ನು ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿರುವ ಮಜುಂದಾರ್ ಷಾ ಕ್ಯಾನ್ಸರ್ ಆಸ್ಪತ್ರೆಗೆ ಕೊಂಡೊಯ್ದು ಪರಿಶೀಲಿಸಿದ್ದು ಅಲ್ಲಿಯ ಉನ್ನತ ವೈದ್ಯರು ಮೂಳೆ ಅಸ್ಥಿ ಮಜ್ಜೆ ಕಸಿ ( Bone Marrow Transplant) ಮಾಡಲು ಸೂಚಿಸಿದ್ದಾರೆ. ಈ ಚಿಕಿತ್ಸೆಗೆ ಅಂದಾಜು ಸುಮಾರು 45 ಲಕ್ಷ ರೂಪಾಯಿ ಖರ್ಚು ತಗಲಲಿದ್ದು ಅಷ್ಟೊಂದು ದೊಡ್ಡ ಮೊತ್ತವನ್ನು ಕ್ರೋಢೀಕರಿಸಲು ಸೆಕ್ಯುರಿಟಿ ಗಾರ್ಡ್ ನವೀನ್ ಗಟ್ಟಿ ಅವರ ಕುಟುಂಬ ಪರದಾಡುವಂತಾಗಿದೆ.

ಇದುವರೆಗಿನ ಚಿಕಿತ್ಸೆಗೆ ಅನೇಕ ಹೃದಯ ವೈಶಾಲ್ಯ ದಾನಿಗಳು ತಮ್ಮಿಂದಾದ ಸಹಾಯ ಹಸ್ತವನ್ನು ನೀಡಿದರ ಫಲವಾಗಿ ತನಿಷ್ ಇಂದು ಬದುಕುಳಿದಿದ್ದಾನೆ. ತನಿಷ್ ನ ಚಿಕಿತ್ಸೆಗೆ ಸಹಾಯ ನೀಡುವಂತೆ ಪೋಷಕರು ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರ ಮೊರೆ ಹೋಗಿದ್ದು ಮರುಗಿದ ಶಾಸಕರು ತನ್ನ ವೈಯಕ್ತಿಕ ಮತ್ತು ಸ್ನೇಹಿತ ವರ್ಗದವರಿಂದ ಸಹಾಯ ಧನವನ್ನು ದೊರಕಿಸುವ ಭರವಸೆ ನೀಡಿದ್ದಾರೆ.


ತನಿಷ್ ಗಟ್ಟಿ ಚಿಕಿತ್ಸೆಗೆ ಬೃಹತ್ ಮೊತ್ತ ಕ್ರೋಡೀಕರಿಸಲು ಬಜರಂಗದಳ ಬೋಳಾರ ಶಾಖೆಯವರು ಪಣ ತೊಟ್ಟಿದ್ದು ಇದುವರೆಗೆ 8 ಲಕ್ಷ ಹಣವು ಕ್ರೋಢೀಕೃತವಾಗಿದೆ.

ವಿಶೇಷ ವೇಷದಲ್ಲಿ ವಿಕ್ಕಿ ಶೆಟ್ಟಿ ಬೆದ್ರರಿಂದಲೂ ಭಿಕ್ಷಾಟನೆ
ತನಿಷ್ ಅವರ ಚಿಕಿತ್ಸೆಗಾಗಿ ನಮ್ಮ ತುಳುನಾಡು ಟ್ರಸ್ಟ್(ರಿ) ಆಶಿಸಾ ನಿಧಿ ಯೋಜನೆಯಡಿ ಸಾಮಾಜಿಕ ಕಾರ್ಯಕರ್ತ ವಿಕ್ಕಿ ಶೆಟ್ಟಿ ಬೆದ್ರ ಅವರು ಪೊಳಲಿ ಶ್ರೀ ರಾಜರಾಜೇಶ್ವರಿ ಧೃಢಕಲಶಾಭಿಷೇಕದಲ್ಲಿ ನಿನ್ನೆಯಿಂದ(ಫೆ.19) ನಾಳೆ ರಾತ್ರಿಯವರೆಗೂ ಭಕ್ತಾದಿಗಳಲ್ಲಿ ಭಿಕ್ಷಾಟನೆ ನಡೆಸುತ್ತಿದ್ದಾರೆ. ವಿಕ್ಕಿ ಶೆಟ್ಟಿ ಬೆದ್ರ ಅವರು ನಾಲ್ಕನೇ ಬಾರಿ ಬಡ ಜನರ ಸೇವೆಗಾಗಿ ವಿಶೇಷ ವೇಷ ಧರಿಸಿ ಸತ್ಕಾರ್ಯ ಮಾಡುತ್ತಿದ್ದಾರೆ.

ತನಿಷ್ ಗಟ್ಟಿ ಚಿಕಿತ್ಸೆಗೆ ಸಹಾಯ ಮಾಡಲಿಚ್ಚಿಸುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಬಹುದಾಗಿದೆ.
Name :- Naveen
Address:- D.No 8-125/1
Kudthadka kankanady bajal mangalore
Branch:- Bajal (Mangalore)
State bank of India
Account number:-38955686728
IFSC CODE:- SBINOOO9052
Mob :(Google pay) 7899500542
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm