ಬ್ರೇಕಿಂಗ್ ನ್ಯೂಸ್
20-02-21 10:33 pm Udupi Correspondent ಕರಾವಳಿ
ಉಡುಪಿ, ಫೆ.20: ಆರೆಸ್ಸೆಸ್ ದೇಣಿಗೆ ಕೇಳಲು ಬಂದರೆ ಒಂದು ರೂಪಾಯಿ ಕೊಡಬೇಡಿ ಎಂದಿದ್ದ ಪಿಎಫ್ಐ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಿ ಎಂದು ಪಿಎಫ್ಐ ಸಂಘಟನೆಯ ಬಳಿ ಯಾರೂ ಹೋಗಿಲ್ಲ. ಮಂದಿರಕ್ಕಾಗಿ ಪಿಎಫ್ಐ ದೇಣಿಗೆಯೂ ಬೇಕಿಲ್ಲ ಎಂದು ಸಂಸದೆ ಶೋಭಾ ಹೇಳಿದ್ದಾರೆ.
ಕಾಪುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಪಿಎಫ್ಐ ರಾಷ್ಟ್ರವಿರೋಧಿ ಸಂಘಟನೆ. ಸಂಘ ಪರಿವಾರದ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆಗೆ ರಾಮ ಮಂದಿರದ ಬಗ್ಗೆ ಮಾತನಾಡುವ ನೈತಕ ಹಕ್ಕೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಎರಡೂ ಸರಕಾರಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪಿಎಫ್ಐ ಮೇಲಿರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಗೃಹ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ಶೀಘ್ರವೇ ಸಂಘಟನೆ ನಿಷೇಧವಾಗುವ ವಿಶ್ವಾಸವಿದೆ ಎಂದವರು ನುಡಿದರು.

ಕೇರಳದಲ್ಲಿ ಪಿಎಫ್ಐ ಓಲೈಕೆ
ಕೇರಳದಲ್ಲಿ ದಂಡ ಹಾಗೂ ಆಯುಧಗಳೊಂದಿಗೆ ಮೆರವಣಿಗೆ ನಡೆಸಲು ಪಿಎಫ್ಐಗೆ ಅನುಮತಿ ನೀಡಿರುವುದು ಮುಸಲ್ಮಾನರ ಓಲೈಕೆಗೆ. ಅಲ್ಲಿನ ಸರಕಾರದ ಅನುಮತಿಯೊಂದಿಗೆ ಇದೆಲ್ಲ ನಡೆಯುತ್ತಿದೆ. ಪಿಎಫ್ಐ ರಾಷ್ಟ್ರ ವಿರೋಧಿ ಸಂಘಟನೆ ಎಂದು ಕೇರಳ ಸರಕಾರಕ್ಕೆ ತಿಳಿದಿದೆ. ತಿಳಿದಿದ್ದರೂ ಮುಸ್ಲಿಮರ ಓಟು ಪಡೆಯಲು ಪಿಎಫ್ಐಗೆ ಈ ರೀತಿಯ ಮೆರವಣಿಗೆ ನಡೆಸಲು ಅನುಮತಿ ನೀಡಿದೆ ಎಂದು ಆರೋಪಿಸಿದರು.
ಅಪರಾಧಿಗಳಿಗೆ ಮೆರವಣಿಗೆಗೆ ಅನುಮತಿ ನೀಡಿರುವುದು ದೇಶ ವಿರೋಧಿ ಚಟುವಟಿಕೆ. ಕೇರಳ ಸರಕಾರದ ಈ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ನುಡಿದರು.
We do not want money from Popular Front of India (PFI) to build Ram Mandir,” said Udupi-Chikkamagaluru MP Shobha Karandlaje.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm