ಬ್ರೇಕಿಂಗ್ ನ್ಯೂಸ್
22-02-21 11:42 am Mangalore Correspondent ಕರಾವಳಿ
ಮಂಗಳೂರು, ಫೆ.21: ಕೃಷ್ಣಾಪುರ 5ನೇ ಬ್ಲಾಕ್ ನಿವಾಸಿ ಕಾಟಿಪಳ್ಳದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ದರ್ಶನ್ (14) ಎಂಬ ಬಾಲಕನ ಆಕಸ್ಮಿಕ ಸಾವಿಗೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕರು ಬೆದರಿಕೆ ಹಾಕಿದ್ದೇ ಕಾರಣ ಎಂದು ಆತನ ಪೋಷಕರು ದೂರು ನೀಡಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನನ್ನ ಮಗನ ಸಾವಿನ ಬಗ್ಗೆ ತನಿಖೆ ನಡೆಸಿ ಕಾರಣಕರ್ತರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಾಲಕ ದರ್ಶನ್ ತಂದೆ ಗೋಪಾಲ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ಶನಿವಾರ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಇಂದು ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಕ್ಲಾಸ್ ಟೀಚರ್ ಅನ್ನು ಠಾಣೆಗೆ ಕರೆಸಿ ಹೇಳಿಕೆ ಪಡೆದಿದ್ದಾರೆ.
ಬಾಲಕ ಫೆ.18ರಂದು ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗದಲ್ಲಿ ಅಟವಾಡುತ್ತಿದ್ದಾಗ ಹಗ್ಗ ಕುತ್ತಿಗೆಗೆ ಬಿಗಿದು ಗಂಭೀರ ಗಾಯಗೊಂಡಿದ್ದ ಎಂದು ಆತನ ಮಾವ ಸುಧಾಕರ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದ ಎನ್ನಲಾಗಿದೆ.
9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಎಲ್ಲ ವಿಷಯಗಳಲ್ಲಿ ಫೇಲಾಗಿದ್ದ. ಅಲ್ಲದೆ ಕ್ಲಾಸ್ ರಿಪೋರ್ಟ್ ಕಾರ್ಡಿಗೆ ಹೆತ್ತವರ ಸಹಿಯನ್ನು ತಾನೇ ಮಾಡಿ ಶಿಕ್ಷಕರಿಗೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರ ಗೊತ್ತಾಗಿ ಶಿಕ್ಷಕರು ಬಾಲಕನನ್ನು ಬೈದಿದ್ದರು ಎನ್ನಲಾಗಿದೆ. ಅಷ್ಟಕ್ಕೇ ಆತ್ಮಹತ್ಯೆ ಮಾಡಿಕೊಂಡನೇ ಅಥವಾ ಹಗ್ಗದಲ್ಲಿ ಆಟವಾಡುವಾಗ ಕುತ್ತಿಗೆ ಬಿಗಿದು ಆಕಸ್ಮಿಕ ಸಾವು ಕಂಡಿದ್ದನೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a 14-year-old boy accidentally hanged himself while playing with a rope in Krishnapura, Surathkal in Mangalore. Parents demand for detailed probe on school.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm