ಬ್ರೇಕಿಂಗ್ ನ್ಯೂಸ್
22-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಪಿಎಫ್ಐ, ಎಸ್ಡಿಪಿಐ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ, ಅವನ್ನು ನಿಷೇಧಿಸಲು ಬಿಜೆಪಿ ಮುಂದಾಗಲ್ಲ. ಬಿಜೆಪಿಗೆ ಎಸ್ ಡಿಪಿಐ ಬೇಕು, ಇವರದ್ದೇ 'ಬಿ' ಟೀಂ ಪಿಎಫ್ಐ, ಎಸ್ಡಿಪಿಐ ಗಳಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಉಡುಪಿಗೆ ತೆರಳಲು ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಪಿಎಫ್ಐ ರ್ಯಾಲಿ ನಡೆಸಲು ಅನುಮತಿ ಕೊಟ್ಟಿದ್ದು ಯಾರು ? ಇದೇ ಬಿಜೆಪಿ ಆಡಳಿತವೇ ಅಲ್ಲವೇ..? ಈಗ ಪಿಎಫ್ಐ, ಎಸ್ ಡಿಪಿಐ ರದ್ದು ಮಾಡುತ್ತೇವೆ, ಆಕ್ಷನ್ ತಗೊಳ್ತೀವಿ ಅಂತಿದ್ದಾರೆ. ಇವ್ರು ಆ ಕೆಲಸಾನ ಮಾಡಲ್ಲ. ಯಾಕಂದ್ರೆ, ಇವರದ್ದೇ ಬಿ ಟೀಮ್ ಅವರದ್ದು ಎಂದು ಬಿಜೆಪಿ ನಾಯಕರನ್ನು ಮೂದಲಿಸಿದರು.

ಪಿಎಫ್ಐ ರದ್ದು ಮಾಡಬೇಕೆಂದಿದ್ದರೆ ಸಾಕಷ್ಟು ಸಾಕ್ಷ್ಯಗಳು ಇವರ ಮುಂದೆನೇ ಇವೆ. ನಿಷೇಧ ಮಾಡಬೇಕೂಂತ ಇದ್ದರೆ ಅದನ್ನು ಕೇಂದ್ರಕ್ಕೆ ಕಳುಹಿಸಿ ನಿಷೇಧ ಮಾಡಬಹುದು. ಇವರದೇ ಸರಕಾರ ಕೇಂದ್ರದಲ್ಲೂ ಇದೆ. ಆದರೆ, ಇವರಿಗೆ ಅದು ಬೇಕಿಲ್ಲ. ಎಸ್ಡಿಪಿಐಯನ್ನು ಬೆಳೆಸುತ್ತಿರುವುದು ಕೂಡ ಇದೇ ಬಿಜೆಪಿ. ಇವರು ತಮ್ಮ ಬೇಳೆ ಬೇಯಿಸಿಕೊಳ್ಳಲೆಂದೇ ಇಂಥವನ್ನು ಪೋಷಿಸಿಕೊಂಡು ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಪುದುಚೇರಿಯಲ್ಲಿ ಸಿಎಂ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿದ್ದು ಹೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾರಾಯಣಸ್ವಾಮಿ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಇರಬಾರದು. ಅವರ ಅಧಿಕಾರಾವಧಿಯಲ್ಲಿ ಚುನಾವಣೆ ನಡೆಯಬಾರದು ಎಂದು ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಇದು ಅಸಾಂವಿಧಾನಿಕವಾಗಿದ್ದು, ಶಾಸಕರನ್ನು ಖರೀದಿಸಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆಪಾದಿಸಿದರು.
Video:
Congress leader Siddaramaiah who arrived in Mangalore slammed the BJP government for Not Banning SDPI and PFI though they are in full power in country.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm