ಬ್ರೇಕಿಂಗ್ ನ್ಯೂಸ್
22-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಪಿಎಫ್ಐ, ಎಸ್ಡಿಪಿಐ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ, ಅವನ್ನು ನಿಷೇಧಿಸಲು ಬಿಜೆಪಿ ಮುಂದಾಗಲ್ಲ. ಬಿಜೆಪಿಗೆ ಎಸ್ ಡಿಪಿಐ ಬೇಕು, ಇವರದ್ದೇ 'ಬಿ' ಟೀಂ ಪಿಎಫ್ಐ, ಎಸ್ಡಿಪಿಐ ಗಳಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಉಡುಪಿಗೆ ತೆರಳಲು ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಪಿಎಫ್ಐ ರ್ಯಾಲಿ ನಡೆಸಲು ಅನುಮತಿ ಕೊಟ್ಟಿದ್ದು ಯಾರು ? ಇದೇ ಬಿಜೆಪಿ ಆಡಳಿತವೇ ಅಲ್ಲವೇ..? ಈಗ ಪಿಎಫ್ಐ, ಎಸ್ ಡಿಪಿಐ ರದ್ದು ಮಾಡುತ್ತೇವೆ, ಆಕ್ಷನ್ ತಗೊಳ್ತೀವಿ ಅಂತಿದ್ದಾರೆ. ಇವ್ರು ಆ ಕೆಲಸಾನ ಮಾಡಲ್ಲ. ಯಾಕಂದ್ರೆ, ಇವರದ್ದೇ ಬಿ ಟೀಮ್ ಅವರದ್ದು ಎಂದು ಬಿಜೆಪಿ ನಾಯಕರನ್ನು ಮೂದಲಿಸಿದರು.

ಪಿಎಫ್ಐ ರದ್ದು ಮಾಡಬೇಕೆಂದಿದ್ದರೆ ಸಾಕಷ್ಟು ಸಾಕ್ಷ್ಯಗಳು ಇವರ ಮುಂದೆನೇ ಇವೆ. ನಿಷೇಧ ಮಾಡಬೇಕೂಂತ ಇದ್ದರೆ ಅದನ್ನು ಕೇಂದ್ರಕ್ಕೆ ಕಳುಹಿಸಿ ನಿಷೇಧ ಮಾಡಬಹುದು. ಇವರದೇ ಸರಕಾರ ಕೇಂದ್ರದಲ್ಲೂ ಇದೆ. ಆದರೆ, ಇವರಿಗೆ ಅದು ಬೇಕಿಲ್ಲ. ಎಸ್ಡಿಪಿಐಯನ್ನು ಬೆಳೆಸುತ್ತಿರುವುದು ಕೂಡ ಇದೇ ಬಿಜೆಪಿ. ಇವರು ತಮ್ಮ ಬೇಳೆ ಬೇಯಿಸಿಕೊಳ್ಳಲೆಂದೇ ಇಂಥವನ್ನು ಪೋಷಿಸಿಕೊಂಡು ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಪುದುಚೇರಿಯಲ್ಲಿ ಸಿಎಂ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿದ್ದು ಹೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾರಾಯಣಸ್ವಾಮಿ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಇರಬಾರದು. ಅವರ ಅಧಿಕಾರಾವಧಿಯಲ್ಲಿ ಚುನಾವಣೆ ನಡೆಯಬಾರದು ಎಂದು ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಇದು ಅಸಾಂವಿಧಾನಿಕವಾಗಿದ್ದು, ಶಾಸಕರನ್ನು ಖರೀದಿಸಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆಪಾದಿಸಿದರು.
Video:
Congress leader Siddaramaiah who arrived in Mangalore slammed the BJP government for Not Banning SDPI and PFI though they are in full power in country.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm