ಬ್ರೇಕಿಂಗ್ ನ್ಯೂಸ್
24-02-21 10:37 am Mangalore Correspondent ಕರಾವಳಿ
ಮಂಗಳೂರು, ಫೆ.24: ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಿನಿ ವಿಧಾನ ಸೌಧದಲ್ಲಿ ಕಂದಾಯ ಇಲಾಖೆಯ ನಗರ ಸರ್ವೇಯರ್ ಆಗಿದ್ದ ಗಂಗಾಧರ್ ಎಂಬಾತ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಮಂಗಳೂರು ನಗರದಲ್ಲಿ ನಾಗರಿಕರೊಬ್ಬರು ತಮ್ಮ ಕಚೇರಿಯ ಪೀಠೋಪಕರಣಕ್ಕಾಗಿ ಮನೆ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಸಲ್ಲಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆ ನಡೆಸಲು 3000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂ. ಜೊತೆ ಮೂರು ಸಾವಿರವನ್ನೂ ಕೊಟ್ಟಿದ್ದರು. ಆದರೆ, ಮತ್ತೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡದೆ ಮತ್ತೆ 30,000 ರೂ. ನೀಡುವಂತೆ ಡಿಮಾಂಡ್ ಇಟ್ಟಿದ್ದರು.

ಇದರಿಂದ ನೊಂದ ವ್ಯಕ್ತಿ ಮಂಗಳೂರಿನ ಎನ್ಇಸಿಎಫ್ ತಂಡದ ಸದಸ್ಯರ ಗಮನಕ್ಕೆ ತಂದಿದ್ದು ಬಳಿಕ ಮಂಗಳೂರಿನ ಎಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಗಮನಕ್ಕೆ ತರಲಾಯಿತು. ಮೂರು ದಿನಗಳ ಬಳಿಕ ಮಂಗಳವಾರ ಸಂಜೆ 5.30 ರ ವೇಳೆಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡಿ, 20 ಸಾವಿರ ಲಂಚದ ಹಣ ತೆಗೆದುಕೊಳ್ಳುತ್ತಿದ್ದಾಗಲೇ ಸರ್ವೇಯರ್ ಗಂಗಾಧರ್ ಎಂ. ಅವರನ್ನು ಎಸಿಬಿ ತಂಡ ಬಂಧಿಸಿದೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂದಿ ಹರಿಪ್ರಸಾದ್, ರಾಧಾಕೃಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು.
A revenue department surveyor was caught red-handed by the ACB officers for taking a bribe. The accused has been identified as Gangadhar.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm