ಬ್ರೇಕಿಂಗ್ ನ್ಯೂಸ್
24-02-21 10:37 am Mangalore Correspondent ಕರಾವಳಿ
ಮಂಗಳೂರು, ಫೆ.24: ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಿನಿ ವಿಧಾನ ಸೌಧದಲ್ಲಿ ಕಂದಾಯ ಇಲಾಖೆಯ ನಗರ ಸರ್ವೇಯರ್ ಆಗಿದ್ದ ಗಂಗಾಧರ್ ಎಂಬಾತ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಮಂಗಳೂರು ನಗರದಲ್ಲಿ ನಾಗರಿಕರೊಬ್ಬರು ತಮ್ಮ ಕಚೇರಿಯ ಪೀಠೋಪಕರಣಕ್ಕಾಗಿ ಮನೆ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಸಲ್ಲಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆ ನಡೆಸಲು 3000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂ. ಜೊತೆ ಮೂರು ಸಾವಿರವನ್ನೂ ಕೊಟ್ಟಿದ್ದರು. ಆದರೆ, ಮತ್ತೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡದೆ ಮತ್ತೆ 30,000 ರೂ. ನೀಡುವಂತೆ ಡಿಮಾಂಡ್ ಇಟ್ಟಿದ್ದರು.

ಇದರಿಂದ ನೊಂದ ವ್ಯಕ್ತಿ ಮಂಗಳೂರಿನ ಎನ್ಇಸಿಎಫ್ ತಂಡದ ಸದಸ್ಯರ ಗಮನಕ್ಕೆ ತಂದಿದ್ದು ಬಳಿಕ ಮಂಗಳೂರಿನ ಎಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಗಮನಕ್ಕೆ ತರಲಾಯಿತು. ಮೂರು ದಿನಗಳ ಬಳಿಕ ಮಂಗಳವಾರ ಸಂಜೆ 5.30 ರ ವೇಳೆಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡಿ, 20 ಸಾವಿರ ಲಂಚದ ಹಣ ತೆಗೆದುಕೊಳ್ಳುತ್ತಿದ್ದಾಗಲೇ ಸರ್ವೇಯರ್ ಗಂಗಾಧರ್ ಎಂ. ಅವರನ್ನು ಎಸಿಬಿ ತಂಡ ಬಂಧಿಸಿದೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂದಿ ಹರಿಪ್ರಸಾದ್, ರಾಧಾಕೃಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು.
A revenue department surveyor was caught red-handed by the ACB officers for taking a bribe. The accused has been identified as Gangadhar.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm