ಬ್ರೇಕಿಂಗ್ ನ್ಯೂಸ್
24-02-21 11:39 am Mangalore Correspondent ಕರಾವಳಿ
ಉಳ್ಳಾಲ, ಫೆ.24: ತೊಕ್ಕೊಟ್ಟಿನ ಒಳಪೇಟೆಯ ಮಾರುಕಟ್ಟೆ ಬಳಿ ರೈಲ್ವೇ ಜಾಗದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಮೂರು ಬೀಫ್ ಸ್ಟಾಲ್ ಗಳನ್ನು ತೆರವುಗೊಳಿಸುವಂತೆ ವಿಶ್ವ ಹಿಂದು ಪರಿಷತ್ ಬಜರಂಗದಳ ಉಳ್ಳಾಲ ಪ್ರಖಂಡವು ಪೊಲೀಸರಿಗೆ ಮತ್ತೆ ಆಗ್ರಹಿಸಿದೆ.
ಕಳೆದ ಜನವರಿ ತಿಂಗಳಲ್ಲಿ ಇದೇ ಮೂರು ಬೀಫ್ ಸ್ಟಾಲ್ ಗಳ ತೆರವಿಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳವು ಉಳ್ಳಾಲ ಠಾಣೆಗೆ ದೂರು ನೀಡಿದ ಬೆನ್ನಲ್ಲೆ ಜನವರಿ 8 ರ ರಾತ್ರಿ ದುಷ್ಕರ್ಮಿಯೊಬ್ಬ ಬೀಫ್ ಸ್ಟಾಲ್ ಗಳಿಗೆ ಬೆಂಕಿಹಚ್ಚಿದ ಪ್ರಕರಣ ತೀವ್ರ ಸ್ವರೂಪ ಪಡೆದಿತ್ತು. ಒತ್ತಡಕ್ಕೆ ಬಿದ್ದ ಪೊಲೀಸರು ಸಿಸಿಟಿವಿ ಆಧಾರದಲ್ಲಿ ಬೆಂಕಿ ಇಟ್ಟ ಆರೋಪಿಯನ್ನು ಬಂಧಿಸಿದ್ದರು.

ಸುಟ್ಟು ಹೋಗಿದ್ದ ಬೀಫ್ ಸ್ಟಾಲ್ ಗಳನ್ನು ಉಳ್ಳಾಲ ನಗರಸಭೆ ಆಡಳಿತವು ಮತ್ತೆ ಪುನರ್ ನಿರ್ಮಿಸಿ ಕೊಟ್ಟಿದ್ದು ಇದೀಗ ಬೀಫ್ ವ್ಯವಹಾರ ನಡೆಯುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು ಈ ಬಗ್ಗೆ ಹಲವು ಮಾನದಂಡಗಳನ್ನು ಸರಕಾರ ವಿಧಿಸಿದೆ. ಆದರೆ ಉಳ್ಳಾಲ ವ್ಯಾಪ್ತಿಯಲ್ಲಿ ಈ ಕಾನೂನು ಎಲ್ಲಿಯೂ ಅನ್ವಯವಾಗದೆ ಅಕ್ರಮ ಕಸಾಯಿಖಾನೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ.

ತೊಕ್ಕೊಟ್ಟು ಒಳಪೇಟೆಯ ಮೂರು ಬೀಫ್ ಸ್ಟಾಲ್ ಗಳು ಪರವಾನಿಗೆ ಇಲ್ಲದೆ ವ್ಯವಹಾರ ನಡೆಸುತ್ತಿದ್ದರೂ ಕ್ರಮ ಯಾಕಿಲ್ಲ ಎನ್ನುವ ಪ್ರಶ್ನೆಯನ್ನು ಕಾರ್ಯಕರ್ತರು ಕೇಳುತ್ತಿದ್ದಾರೆ. ಪೊಲೀಸರು ಒಳಪೇಟೆಯ 3 ಅಕ್ರಮ ಕಸಾಯಿ ಖಾನೆಗಳು ಮತ್ತು ಇಲ್ಲಿಗೆ ಅಕ್ರಮವಾಗಿ ಗೋಮಾಂಸ ಸರಬರಾಜು ಮಾಡುವ ವಾಹನ ಮತ್ತು ಕಸಾಯಿಖಾನೆಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಬಜರಂಗದಳವು ಮತ್ತೆ ಆಗ್ರಹಿಸಿದ್ದು ಉಳ್ಳಾಲ ಪೊಲೀಸರಿಗೆ ಮನವಿ ನೀಡಿದ್ದಾರೆ.

ಈ ಬಗ್ಗೆ ಲಿಖಿತ ದೂರನ್ನು ವಿಶ್ವ ಹಿಂದು ಪರಿಷತ್, ಬಜರಂಗದಳ ಮುಖಂಡರು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರಿಗೆ ನೀಡಿದ್ದಾರೆ. ಬಜರಂಗದಳ ಜಿಲ್ಲಾ ಸಹ ಗೋರಕ್ಷ ಪ್ರಮುಖ್ ಪವಿತ್ರ ಕೆರೆಬೈಲು, ಬಜರಂಗದಳ ಪ್ರಖಂಡ ಸಂಚಾಲಕ ಅರ್ಜುನ್, ಪ್ರಖಂಡ ಗೋರಕ್ಷ ಪ್ರಮುಖ್ ರಕ್ಷಿತ್, ಸಾಪ್ತಾಹಿಕ ಪ್ರಮುಖ್ ಕೌಶಿಕ್ ಉಪಸ್ಥಿತರಿದ್ದರು.
ತೊಕ್ಕೊಟ್ಟಿನಲ್ಲಿ ಅಕ್ರಮ ಬೀಫ್ ಸ್ಟಾಲ್ ; ತೆರವಿಗೆ ಆಗ್ರಹಿಸಿ ಬಜರಂಗದಳ ದೂರು
Three Unauthorised beef staffs in Ullal found VHP activists demand serious action against them. A case has been filed at Ullal police station in Mangalore.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm