ಬ್ರೇಕಿಂಗ್ ನ್ಯೂಸ್
24-02-21 08:39 pm Mangaluru correspondant ಕರಾವಳಿ
ಮಂಗಳೂರು, ಫೆ.24: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬರುವ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಆದರೆ, ಈ ರೀತಿಯ ಆದೇಶ ಮಾಡಿದ್ದರೂ, ಮುಂಬೈ ಕಡೆಯಿಂದ ಬರುವ ಪ್ಯಾಸೆಂಜರ್ ಬಸ್ ಗಳು ಈಗ ಒಳದಾರಿಯಿಂದ ಕರ್ನಾಟಕಕ್ಕೆ ಬರುತ್ತಿರುವುದಾಗಿ ದೂರು ಕೇಳಿಬಂದಿದೆ.
ಮಂಗಳೂರಿನಿಂದ ವಯಾ ಬೆಳಗಾವಿ ಮೂಲಕ ಮುಂಬೈಗೆ ದಿನವೂ 18 ಬಸ್ ಗಳು ಸಂಚರಿಸುತ್ತವೆ. ದಿನವೂ ಮಂಗಳೂರಿನಿಂದ ತೆರಳುವ ಬಸ್, ಅಷ್ಟೇ ಸಂಖ್ಯೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಹಿಂತಿರುಗಿ ಬರುತ್ತದೆ. ಈ ಬಸ್ ಗಳೆಲ್ಲ ಸಾಮಾನ್ಯವಾಗಿ ಬೆಳಗಾವಿಯಿಂದ ಕೊಲ್ಲಾಪುರ ಚೆಕ್ ಪೋಸ್ಟ್ ಮೂಲಕವೇ ಹೋಗುವುದು ಮತ್ತು ಬರುವುದನ್ನು ಮಾಡುತ್ತದೆ. ಆದರೆ, ಈಗ ಕೋವಿಡ್ ನಿರ್ಬಂಧ ವಿಧಿಸಿರುವ ಕಾರಣ ಕೊಲ್ಲಾಪುರ ಚೆಕ್ ಪೋಸ್ಟ್ ನಲ್ಲಿ ಕರ್ನಾಟಕದ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಬರುವ ಬಸ್ ಗಳನ್ನು ತಡೆಯಲಾಗುತ್ತದೆ.


ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ಮಾಡಲಾಗುತ್ತದೆ. ಆದರೆ, 72 ಗಂಟೆಗಳ ಹಿಂದೆ ಪಡೆದ ನೆಗೆಟಿವ್ ರಿಪೋರ್ಟ್ ಹೆಚ್ಚಿನ ಮಂದಿಯಲ್ಲಿ ಇರುವುದಿಲ್ಲ. ಹೀಗಾಗಿ ಬಸ್ ಗಳನ್ನು ಕೊಲ್ಲಾಪುರದಿಂದ ಕರ್ನಾಟಕ ಪ್ರವೇಶ ಮಾಡಲು ಬಿಡುವುದಿಲ್ಲ. ಅಧಿಕಾರಿಗಳ ಕಿರಿ ಕಿರಿಯನ್ನು ತಪ್ಪಿಸುವುದಕ್ಕಾಗಿ ಈಗ ಮಂಗಳೂರಿನ ಬಸ್ ಗಳು ಒಳದಾರಿಯನ್ನು ಕಂಡುಕೊಂಡಿವೆ ಎನ್ನುತ್ತಾರೆ, ಪ್ರಯಾಣಿಕರು.
ಕೊಲ್ಲಾಪುರ ಹೈವೇ ಬದಲಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಎಂಬಲ್ಲಿ ಕಾಡುದಾರಿ ಮೂಲಕ ಬಸ್ ಗಳು ಕರ್ನಾಟಕ ಪ್ರವೇಶ ಮಾಡುತ್ತಿದ್ದು, ಚೆಕ್ಕಿಂಗ್ ತಪ್ಪಿಸ್ಕೊಂಡು ಒಳಬರುತ್ತಿವೆ ಎನ್ನಲಾಗಿದೆ. ದಿನವೂ ಬಸ್ ಸೀಟು ಭರ್ತಿ ಮಾಡಿಕೊಂಡು ಬಂದರೆ, ಮಂಗಳೂರು ನಗರ ಒಂದಕ್ಕೆ 18 ಬಸ್ ಗಳಲ್ಲಿ ಸುಮಾರು 900 ಮಂದಿ ಬರುತ್ತಾರೆ. ಇದೇ ರೀತಿ ಬೇರೆ ಬೇರೆ ನಗರಗಳಿಗೂ ಒಳದಾರಿ ಮೂಲಕ ಬಸ್ ಗಳು ಬರುತ್ತಿದ್ದು, ಕರ್ನಾಟಕದ ಗಡಿ ನಿರ್ಬಂಧ ಹೆಸರಿಗಷ್ಟೇ ಅನ್ನುವ ಮಾತು ಕೇಳಿಬರುತ್ತಿದೆ.
ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಕೋವಿಡ್ ಪೀಡಿತರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದೆ. ಆದರೆ, ಟೂರಿಸ್ಟ್ ಬಸ್ ಗಳು ಸರಕಾರದ ಆದೇಶವನ್ನು ಗಾಳಿಗೆ ತೂರಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
It has come to light that Mangalore-Mumbai buses take shortcuts to evade check-post of Kolhapur because health officer demand covid negative report of passengers.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm