ಬ್ರೇಕಿಂಗ್ ನ್ಯೂಸ್
24-02-21 08:39 pm Mangaluru correspondant ಕರಾವಳಿ
ಮಂಗಳೂರು, ಫೆ.24: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬರುವ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಆದರೆ, ಈ ರೀತಿಯ ಆದೇಶ ಮಾಡಿದ್ದರೂ, ಮುಂಬೈ ಕಡೆಯಿಂದ ಬರುವ ಪ್ಯಾಸೆಂಜರ್ ಬಸ್ ಗಳು ಈಗ ಒಳದಾರಿಯಿಂದ ಕರ್ನಾಟಕಕ್ಕೆ ಬರುತ್ತಿರುವುದಾಗಿ ದೂರು ಕೇಳಿಬಂದಿದೆ.
ಮಂಗಳೂರಿನಿಂದ ವಯಾ ಬೆಳಗಾವಿ ಮೂಲಕ ಮುಂಬೈಗೆ ದಿನವೂ 18 ಬಸ್ ಗಳು ಸಂಚರಿಸುತ್ತವೆ. ದಿನವೂ ಮಂಗಳೂರಿನಿಂದ ತೆರಳುವ ಬಸ್, ಅಷ್ಟೇ ಸಂಖ್ಯೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಹಿಂತಿರುಗಿ ಬರುತ್ತದೆ. ಈ ಬಸ್ ಗಳೆಲ್ಲ ಸಾಮಾನ್ಯವಾಗಿ ಬೆಳಗಾವಿಯಿಂದ ಕೊಲ್ಲಾಪುರ ಚೆಕ್ ಪೋಸ್ಟ್ ಮೂಲಕವೇ ಹೋಗುವುದು ಮತ್ತು ಬರುವುದನ್ನು ಮಾಡುತ್ತದೆ. ಆದರೆ, ಈಗ ಕೋವಿಡ್ ನಿರ್ಬಂಧ ವಿಧಿಸಿರುವ ಕಾರಣ ಕೊಲ್ಲಾಪುರ ಚೆಕ್ ಪೋಸ್ಟ್ ನಲ್ಲಿ ಕರ್ನಾಟಕದ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಬರುವ ಬಸ್ ಗಳನ್ನು ತಡೆಯಲಾಗುತ್ತದೆ.


ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ಮಾಡಲಾಗುತ್ತದೆ. ಆದರೆ, 72 ಗಂಟೆಗಳ ಹಿಂದೆ ಪಡೆದ ನೆಗೆಟಿವ್ ರಿಪೋರ್ಟ್ ಹೆಚ್ಚಿನ ಮಂದಿಯಲ್ಲಿ ಇರುವುದಿಲ್ಲ. ಹೀಗಾಗಿ ಬಸ್ ಗಳನ್ನು ಕೊಲ್ಲಾಪುರದಿಂದ ಕರ್ನಾಟಕ ಪ್ರವೇಶ ಮಾಡಲು ಬಿಡುವುದಿಲ್ಲ. ಅಧಿಕಾರಿಗಳ ಕಿರಿ ಕಿರಿಯನ್ನು ತಪ್ಪಿಸುವುದಕ್ಕಾಗಿ ಈಗ ಮಂಗಳೂರಿನ ಬಸ್ ಗಳು ಒಳದಾರಿಯನ್ನು ಕಂಡುಕೊಂಡಿವೆ ಎನ್ನುತ್ತಾರೆ, ಪ್ರಯಾಣಿಕರು.
ಕೊಲ್ಲಾಪುರ ಹೈವೇ ಬದಲಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಎಂಬಲ್ಲಿ ಕಾಡುದಾರಿ ಮೂಲಕ ಬಸ್ ಗಳು ಕರ್ನಾಟಕ ಪ್ರವೇಶ ಮಾಡುತ್ತಿದ್ದು, ಚೆಕ್ಕಿಂಗ್ ತಪ್ಪಿಸ್ಕೊಂಡು ಒಳಬರುತ್ತಿವೆ ಎನ್ನಲಾಗಿದೆ. ದಿನವೂ ಬಸ್ ಸೀಟು ಭರ್ತಿ ಮಾಡಿಕೊಂಡು ಬಂದರೆ, ಮಂಗಳೂರು ನಗರ ಒಂದಕ್ಕೆ 18 ಬಸ್ ಗಳಲ್ಲಿ ಸುಮಾರು 900 ಮಂದಿ ಬರುತ್ತಾರೆ. ಇದೇ ರೀತಿ ಬೇರೆ ಬೇರೆ ನಗರಗಳಿಗೂ ಒಳದಾರಿ ಮೂಲಕ ಬಸ್ ಗಳು ಬರುತ್ತಿದ್ದು, ಕರ್ನಾಟಕದ ಗಡಿ ನಿರ್ಬಂಧ ಹೆಸರಿಗಷ್ಟೇ ಅನ್ನುವ ಮಾತು ಕೇಳಿಬರುತ್ತಿದೆ.
ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಕೋವಿಡ್ ಪೀಡಿತರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದೆ. ಆದರೆ, ಟೂರಿಸ್ಟ್ ಬಸ್ ಗಳು ಸರಕಾರದ ಆದೇಶವನ್ನು ಗಾಳಿಗೆ ತೂರಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
It has come to light that Mangalore-Mumbai buses take shortcuts to evade check-post of Kolhapur because health officer demand covid negative report of passengers.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm