ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.


ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am