ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.


ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm