ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.


ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm