ಬ್ರೇಕಿಂಗ್ ನ್ಯೂಸ್
25-02-21 04:46 pm Mangalore Correspondent ಕರಾವಳಿ
ಮಂಗಳೂರು, ಫೆ.25: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದುಬೈನಿಂದ ಬರುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಒಂದು ಕೇಜಿಗೂ ಮಿಕ್ಕಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ರಶೀದ್ ಎಂಬಾತ ಚಡ್ಡಿ ಒಳಗಿಟ್ಟು ಚಿನ್ನ ತರುತ್ತಿದ್ದಾಗ, ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದ ಟಾಯ್ಲೆಟ್ ಏರಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಮೂರು ಉಂಡೆಗಳಾಗಿಸಿ ಗಮ್ ಪೇಸ್ಟಿನಲ್ಲಿ ಮಿಕ್ಸ್ ಮಾಡಿ, ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿಟ್ಟಿದ್ದ. ಅದನ್ನು ನೀಲಿ ಬಣ್ಣದ ಟೇಪ್ ಸುತ್ತಿ ಚಡ್ಡಿಯ ಒಳಗಿಟ್ಟುಕೊಂಡಿದ್ದ. ಒಟ್ಟು 825 ಗ್ರಾಮ್ ಭಾರದ ಮುದ್ದೆಯಲ್ಲಿ 632 ಗ್ರಾಮ್ ಅಪ್ಪಟ ಬಂಗಾರ ಇದ್ದುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ 30.75 ಲಕ್ಷ ಎಂದು ಅಂದಾಜಿಸಿದ್ದಾರೆ.


ಇನ್ನೊಬ್ಬ ಕಾಸರಗೋಡಿನ ಪಿಲಿಕೂರು ನಿವಾಸಿ ಅಬ್ದುಲ್ ನಿಸಾದ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದು ದುಬೈನಿಂದ ತರುತ್ತಿದ್ದ ಪೆನ್ ಮತ್ತು ಎಮರ್ಜೆನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನವನ್ನು ಪತ್ತೆ ಮಾಡಲಾಗಿದೆ. ಈತನಲ್ಲಿ 30.26 ಲಕ್ಷ ಮೌಲ್ಯದ 629 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಕಸ್ಟಮ್ಸ್ ವಿಭಾಗದ ಡೆಪ್ಯುಟಿ ಕಮಿಷನರ್ ಆಗಿರುವ ಅವಿನಾಶ್ ಕುಮಾರ್ ರೊಂಗಾಲಿ ಮತ್ತು ಪ್ರವೀಣ್ ಖಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
(2/3) Seizure from refill portions of pens pic.twitter.com/Kbe4ZjyTI5
— Customs-Mangaluru (@Cusmglr) February 25, 2021
Mangalore Customs officers seized gold of net wt 1.267 kg & total value Rs. 61.02 lakhs from 2 passengers on 23rd & 24th Feb '21. Gold was concealed inside pens & batteries of emergency lights. Both the passengers have been arrested.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm