ಬ್ರೇಕಿಂಗ್ ನ್ಯೂಸ್
28-02-21 05:59 pm Mangaluru correspondent ಕರಾವಳಿ
ಮಂಗಳೂರು, ಫೆ.28: ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ಮಾರುವೇಷದಲ್ಲಿ ನಡೆಸಿದ ಅಕ್ರಮ ಮರಳು ಸಾಗಾಟ ಪತ್ತೆ ಕಾರ್ಯಾಚರಣೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಲಾರಿ ಚಾಲಕ ಸೂರಜ್, ಲಾರಿಯಲ್ಲಿದ್ದ ಚಂದ್ರಹಾಸ, ರಾಕೇಶ್, ಸನಮ್ ಮತ್ತು ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ (ಕೆಎ 19 ಎಸಿ 3559) ಮಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಲಾರಿಯನ್ನು ನಿಲ್ಲಿಸಿ, ಪ್ರಶ್ನೆ ಮಾಡಿದಾಗ ಬೆದರಿದ ಚಾಲಕ ಸೂರಜ್ ಲಾರಿ ಬಿಟ್ಟು ಓಡಿ ಪರಾರಿಯಾಗಿದ್ದಾನೆ. ಇತರೇ ಮೂವರನ್ನು ಉಳ್ಳಾಲ ಪೊಲೀಸರು ಬಂದು ಬಂಧಿಸಿದ್ದರು. ಡಿಸಿಪಿಯನ್ನೇ ದೂರುದಾರನನ್ನಾಗಿಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಟಿಪ್ಪರ್ ಲಾರಿಗೆ ಬೆಂಗಾವಲಾಗಿ ಬರುತ್ತಿದ್ದ ಎರಡು ಕಾರು ಮತ್ತು ಅದರಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಲ್ಯಾಸ್, ರಹೀಂ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಕಾರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ಅವರನ್ನು ದೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಹಲ್ಲೆಗೈದು ಪರಾರಿಯಾಗಿದ್ದರು. ಈ ಸಂಬಂಧ ಉಳ್ಳಾಲ ಎಸ್ಐ ಚಂದ್ರ ದೂರುದಾರರಾಗಿದ್ದು ಎರಡು ಕಾರು ಕೆಎ 19 ಎಂ ಎಚ್ 0649 ಮತ್ತು ಕೆಎಲ್ 14 ಕೆ 8199 ಹಾಗೂ ಆರೋಪಿಗಳ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸರಿಗೆ ಹಲ್ಲೆಗೈದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ಬಳಿಕ, ಕೋಟೆಕಾರು, ಬೀರಿ ಮತ್ತು ಉಳ್ಳಾಲದ ಅಜ್ಕಿನಡ್ಕದಲ್ಲಿ ಮರಳು ದಾಸ್ತಾನು ಮಾಡಿರುವುದನ್ನು ಉಳ್ಳಾಲ ಪೊಲೀಸರು ಪತ್ತೆ ಮಾಡಿದ್ದಾರೆ. ಮೂರು ಲಾರಿ ಹಾಗೂ ವಿವಿಧ ಕಡೆ ದಾಸ್ತಾನು ಮಾಡಿದ್ದ ಸುಮಾರು 12 ಲೋಡ್ ಮರಳನ್ನು ಜಪ್ತಿ ಮಾಡಲಾಗಿದೆ. ಈ ಮರಳನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸಲು ದಾಸ್ತಾನು ಮಾಡಿರುವುದಾಗಿ ಪೊಲೀಸರು ಪತ್ತೆ ಮಾಡಿದ್ದಾರೆ.
Illegal sand and trucks that were been transported to Kerala was seized at Ulall Police Station Limits by Police Commissioner Shahsi Kumar and Dcp Hariram.
26-03-26 12:31 pm
HK News Staffer
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
26-03-26 07:19 pm
HK News Staffer
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm