ಬ್ರೇಕಿಂಗ್ ನ್ಯೂಸ್
28-02-21 05:59 pm Mangaluru correspondent ಕರಾವಳಿ
ಮಂಗಳೂರು, ಫೆ.28: ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ಮಾರುವೇಷದಲ್ಲಿ ನಡೆಸಿದ ಅಕ್ರಮ ಮರಳು ಸಾಗಾಟ ಪತ್ತೆ ಕಾರ್ಯಾಚರಣೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಲಾರಿ ಚಾಲಕ ಸೂರಜ್, ಲಾರಿಯಲ್ಲಿದ್ದ ಚಂದ್ರಹಾಸ, ರಾಕೇಶ್, ಸನಮ್ ಮತ್ತು ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ (ಕೆಎ 19 ಎಸಿ 3559) ಮಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಲಾರಿಯನ್ನು ನಿಲ್ಲಿಸಿ, ಪ್ರಶ್ನೆ ಮಾಡಿದಾಗ ಬೆದರಿದ ಚಾಲಕ ಸೂರಜ್ ಲಾರಿ ಬಿಟ್ಟು ಓಡಿ ಪರಾರಿಯಾಗಿದ್ದಾನೆ. ಇತರೇ ಮೂವರನ್ನು ಉಳ್ಳಾಲ ಪೊಲೀಸರು ಬಂದು ಬಂಧಿಸಿದ್ದರು. ಡಿಸಿಪಿಯನ್ನೇ ದೂರುದಾರನನ್ನಾಗಿಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಟಿಪ್ಪರ್ ಲಾರಿಗೆ ಬೆಂಗಾವಲಾಗಿ ಬರುತ್ತಿದ್ದ ಎರಡು ಕಾರು ಮತ್ತು ಅದರಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಲ್ಯಾಸ್, ರಹೀಂ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಕಾರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ಅವರನ್ನು ದೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಹಲ್ಲೆಗೈದು ಪರಾರಿಯಾಗಿದ್ದರು. ಈ ಸಂಬಂಧ ಉಳ್ಳಾಲ ಎಸ್ಐ ಚಂದ್ರ ದೂರುದಾರರಾಗಿದ್ದು ಎರಡು ಕಾರು ಕೆಎ 19 ಎಂ ಎಚ್ 0649 ಮತ್ತು ಕೆಎಲ್ 14 ಕೆ 8199 ಹಾಗೂ ಆರೋಪಿಗಳ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸರಿಗೆ ಹಲ್ಲೆಗೈದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ಬಳಿಕ, ಕೋಟೆಕಾರು, ಬೀರಿ ಮತ್ತು ಉಳ್ಳಾಲದ ಅಜ್ಕಿನಡ್ಕದಲ್ಲಿ ಮರಳು ದಾಸ್ತಾನು ಮಾಡಿರುವುದನ್ನು ಉಳ್ಳಾಲ ಪೊಲೀಸರು ಪತ್ತೆ ಮಾಡಿದ್ದಾರೆ. ಮೂರು ಲಾರಿ ಹಾಗೂ ವಿವಿಧ ಕಡೆ ದಾಸ್ತಾನು ಮಾಡಿದ್ದ ಸುಮಾರು 12 ಲೋಡ್ ಮರಳನ್ನು ಜಪ್ತಿ ಮಾಡಲಾಗಿದೆ. ಈ ಮರಳನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸಲು ದಾಸ್ತಾನು ಮಾಡಿರುವುದಾಗಿ ಪೊಲೀಸರು ಪತ್ತೆ ಮಾಡಿದ್ದಾರೆ.
Illegal sand and trucks that were been transported to Kerala was seized at Ulall Police Station Limits by Police Commissioner Shahsi Kumar and Dcp Hariram.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm