ಬ್ರೇಕಿಂಗ್ ನ್ಯೂಸ್
01-03-21 05:45 pm Mangalore Correspondent ಕರಾವಳಿ
ಬಂಟ್ವಾಳ, ಮಾ.1: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ವಿಪರೀತವಾಗಿ ಏರುತ್ತಿರುವುದನ್ನು ಅಣಕಿಸಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.


ತೈಲ ಬೆಲೆ ಏರಿಕೆ ಆಗಿರುವುದರಿಂದ ವಾಹನಗಳ ಉಪಯೋಗ ಸಾಧ್ಯವಾಗದ ಸ್ಥಿತಿ ತಲುಪಿದ್ದು ಹೀಗಾಗಿ ಹಳೆಯ ಕಾಲದ ರೀತಿ ಕತ್ತೆಯಲ್ಲಿ ವಸ್ತುಗಳನ್ನು ತುಂಬಿಕೊಂಡು ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಕೈಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಸ್ವತಃ ರಮಾನಾಥ ರೈ ಸೇರಿದಂತೆ ಕಾರ್ಯಕರ್ತರು ರಸ್ತೆಯುದ್ದಕ್ಕೂ ಎಳೆದುಕೊಂಡು ಮೆರವಣಿಗೆ ನಡೆಸಿದರು. ಈ ಮೂಲಕ ಜನರ ಗಮನ ಸೆಳೆಯಲಾಯಿತು.


ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳ ನೀತಿಯನ್ನು ಖಂಡಿಸಿದರು.



ಈ ವೇಳೆ ರಮಾನಾಥ ರೈ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಹೀಗೆ ದಿನಬಳಕೆಯ ವಸ್ತುಗಳ ಮೇಲೆ ವಿಪರೀತ ತೆರಿಗೆ ವಿಧಿಸಿದ್ದು ಸಾಮಾನ್ಯ ಜನರ ಮೇಲೆ ಬರೆ ಹಾಕುತ್ತಿದ್ದಾರೆ. ಜನ ಸಾಮಾನ್ಯರು ಕೊರೊನಾ ಸಂದರ್ಭದಲ್ಲಿ ತೊಂದರೆ ಅನುಭವಿಸಿದರು. ಈಗ ತೈಲ ಬೆಲೆ ಹೆಸರಲ್ಲಿ ಜನರನ್ನು ಪೀಡಿಸುತ್ತಿದ್ದಾರೆ. ಇದೇ ವೇಳೆ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಿನ ಪ್ಯಾಕೇಜ್ ನೀಡುತ್ತಾರೆ. ಬಡ ಜನರ ಮೇಲೆ ಹೊರೆ ಹೊರಿಸಿ ಕಾರ್ಪೊರೇಟ್ ಕಂಪನಿಗಳ ಹೊಟ್ಟೆ ತುಂಬಿಸುವ ಕೆಲಸ ಯಾಕೆ ? ಇವರು ಹಿಂದೆ ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಏರಿಕೆಯನ್ನೇ ಮುಂದಿಟ್ಟು ಹೋರಾಟ ಮಾಡಿ ಅಧಿಕಾರಕ್ಕೇರಿದರು. ಈಗ ಯಾಕೆ ಬಿಜೆಪಿಯವರಿಗೆ ತೈಲ ಬೆಲೆ ಇಳಿಸಲು ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.



ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸೇರಿ ಹಲವರು ಪಾಲ್ಗೊಂಡಿದ್ದರು.
Raise in petrol diesel price bantwal Congress leaders protest by making Donkeys pull bikes. Former Minister Ramanth Rai also participated in the protest
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm