ಬ್ರೇಕಿಂಗ್ ನ್ಯೂಸ್
01-03-21 05:45 pm Mangalore Correspondent ಕರಾವಳಿ
ಬಂಟ್ವಾಳ, ಮಾ.1: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ವಿಪರೀತವಾಗಿ ಏರುತ್ತಿರುವುದನ್ನು ಅಣಕಿಸಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.


ತೈಲ ಬೆಲೆ ಏರಿಕೆ ಆಗಿರುವುದರಿಂದ ವಾಹನಗಳ ಉಪಯೋಗ ಸಾಧ್ಯವಾಗದ ಸ್ಥಿತಿ ತಲುಪಿದ್ದು ಹೀಗಾಗಿ ಹಳೆಯ ಕಾಲದ ರೀತಿ ಕತ್ತೆಯಲ್ಲಿ ವಸ್ತುಗಳನ್ನು ತುಂಬಿಕೊಂಡು ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಕೈಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಸ್ವತಃ ರಮಾನಾಥ ರೈ ಸೇರಿದಂತೆ ಕಾರ್ಯಕರ್ತರು ರಸ್ತೆಯುದ್ದಕ್ಕೂ ಎಳೆದುಕೊಂಡು ಮೆರವಣಿಗೆ ನಡೆಸಿದರು. ಈ ಮೂಲಕ ಜನರ ಗಮನ ಸೆಳೆಯಲಾಯಿತು.


ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳ ನೀತಿಯನ್ನು ಖಂಡಿಸಿದರು.



ಈ ವೇಳೆ ರಮಾನಾಥ ರೈ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಹೀಗೆ ದಿನಬಳಕೆಯ ವಸ್ತುಗಳ ಮೇಲೆ ವಿಪರೀತ ತೆರಿಗೆ ವಿಧಿಸಿದ್ದು ಸಾಮಾನ್ಯ ಜನರ ಮೇಲೆ ಬರೆ ಹಾಕುತ್ತಿದ್ದಾರೆ. ಜನ ಸಾಮಾನ್ಯರು ಕೊರೊನಾ ಸಂದರ್ಭದಲ್ಲಿ ತೊಂದರೆ ಅನುಭವಿಸಿದರು. ಈಗ ತೈಲ ಬೆಲೆ ಹೆಸರಲ್ಲಿ ಜನರನ್ನು ಪೀಡಿಸುತ್ತಿದ್ದಾರೆ. ಇದೇ ವೇಳೆ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಿನ ಪ್ಯಾಕೇಜ್ ನೀಡುತ್ತಾರೆ. ಬಡ ಜನರ ಮೇಲೆ ಹೊರೆ ಹೊರಿಸಿ ಕಾರ್ಪೊರೇಟ್ ಕಂಪನಿಗಳ ಹೊಟ್ಟೆ ತುಂಬಿಸುವ ಕೆಲಸ ಯಾಕೆ ? ಇವರು ಹಿಂದೆ ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಏರಿಕೆಯನ್ನೇ ಮುಂದಿಟ್ಟು ಹೋರಾಟ ಮಾಡಿ ಅಧಿಕಾರಕ್ಕೇರಿದರು. ಈಗ ಯಾಕೆ ಬಿಜೆಪಿಯವರಿಗೆ ತೈಲ ಬೆಲೆ ಇಳಿಸಲು ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.



ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸೇರಿ ಹಲವರು ಪಾಲ್ಗೊಂಡಿದ್ದರು.
Raise in petrol diesel price bantwal Congress leaders protest by making Donkeys pull bikes. Former Minister Ramanth Rai also participated in the protest
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm