ಬ್ರೇಕಿಂಗ್ ನ್ಯೂಸ್
01-03-21 05:45 pm Mangalore Correspondent ಕರಾವಳಿ
ಬಂಟ್ವಾಳ, ಮಾ.1: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ವಿಪರೀತವಾಗಿ ಏರುತ್ತಿರುವುದನ್ನು ಅಣಕಿಸಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.


ತೈಲ ಬೆಲೆ ಏರಿಕೆ ಆಗಿರುವುದರಿಂದ ವಾಹನಗಳ ಉಪಯೋಗ ಸಾಧ್ಯವಾಗದ ಸ್ಥಿತಿ ತಲುಪಿದ್ದು ಹೀಗಾಗಿ ಹಳೆಯ ಕಾಲದ ರೀತಿ ಕತ್ತೆಯಲ್ಲಿ ವಸ್ತುಗಳನ್ನು ತುಂಬಿಕೊಂಡು ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಕೈಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಸ್ವತಃ ರಮಾನಾಥ ರೈ ಸೇರಿದಂತೆ ಕಾರ್ಯಕರ್ತರು ರಸ್ತೆಯುದ್ದಕ್ಕೂ ಎಳೆದುಕೊಂಡು ಮೆರವಣಿಗೆ ನಡೆಸಿದರು. ಈ ಮೂಲಕ ಜನರ ಗಮನ ಸೆಳೆಯಲಾಯಿತು.


ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳ ನೀತಿಯನ್ನು ಖಂಡಿಸಿದರು.



ಈ ವೇಳೆ ರಮಾನಾಥ ರೈ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಹೀಗೆ ದಿನಬಳಕೆಯ ವಸ್ತುಗಳ ಮೇಲೆ ವಿಪರೀತ ತೆರಿಗೆ ವಿಧಿಸಿದ್ದು ಸಾಮಾನ್ಯ ಜನರ ಮೇಲೆ ಬರೆ ಹಾಕುತ್ತಿದ್ದಾರೆ. ಜನ ಸಾಮಾನ್ಯರು ಕೊರೊನಾ ಸಂದರ್ಭದಲ್ಲಿ ತೊಂದರೆ ಅನುಭವಿಸಿದರು. ಈಗ ತೈಲ ಬೆಲೆ ಹೆಸರಲ್ಲಿ ಜನರನ್ನು ಪೀಡಿಸುತ್ತಿದ್ದಾರೆ. ಇದೇ ವೇಳೆ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಿನ ಪ್ಯಾಕೇಜ್ ನೀಡುತ್ತಾರೆ. ಬಡ ಜನರ ಮೇಲೆ ಹೊರೆ ಹೊರಿಸಿ ಕಾರ್ಪೊರೇಟ್ ಕಂಪನಿಗಳ ಹೊಟ್ಟೆ ತುಂಬಿಸುವ ಕೆಲಸ ಯಾಕೆ ? ಇವರು ಹಿಂದೆ ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಏರಿಕೆಯನ್ನೇ ಮುಂದಿಟ್ಟು ಹೋರಾಟ ಮಾಡಿ ಅಧಿಕಾರಕ್ಕೇರಿದರು. ಈಗ ಯಾಕೆ ಬಿಜೆಪಿಯವರಿಗೆ ತೈಲ ಬೆಲೆ ಇಳಿಸಲು ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.



ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸೇರಿ ಹಲವರು ಪಾಲ್ಗೊಂಡಿದ್ದರು.
Raise in petrol diesel price bantwal Congress leaders protest by making Donkeys pull bikes. Former Minister Ramanth Rai also participated in the protest
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm