ಬ್ರೇಕಿಂಗ್ ನ್ಯೂಸ್
02-03-21 02:59 pm Mangalore Correspondent ಕರಾವಳಿ
ಮಂಗಳೂರು, ಮಾ.2: ಅಂತೂ ಮಹಾನಗರ ಪಾಲಿಕೆಯಲ್ಲಿ ಪ್ರೇಮಾನಂದ ಶೆಟ್ಟಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮಂಗಳಾದೇವಿ ವಾರ್ಡಿನಲ್ಲಿ ಐದು ಬಾರಿ ಗೆದ್ದಿದ್ದ ಹಿರಿಯ ಸದಸ್ಯ ಈ ಹಿಂದೆಯೇ ಮೇಯರ್ ಆಗಬೇಕಿತ್ತು. ಆ ಬಗ್ಗೆ ಕಾರ್ಯಕರ್ತರ ಕಡೆಯಿಂದ ಪ್ರೇಮಣ್ಣ ಮೇಯರ್ ಆಗಬೇಕೆಂಬ ಮಾತೂ ಕೇಳಿಬರ್ತಿತ್ತು. ಈ ಬಾರಿ ಸಾಮಾನ್ಯ ವಿಭಾಗಕ್ಕೆ ಮೀಸಲು ಬಂದ ಕಾರಣವೋ ಏನೋ ಅಂತೂ ಪ್ರೇಮಾನಂದ ಶೆಟ್ಟಿ ಮಂಗಳೂರಿನ 22ನೇ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.


ಪಾಲಿಕೆಯ ಸಭಾಂಗಣದಲ್ಲಿ ಮೈಸೂರು ವಿಭಾಗೀಯ ಆಯುಕ್ತ ಡಾ.ಪ್ರಕಾಶ್ ನೇತೃತ್ವದಲ್ಲಿ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಿತು. 44 ಸದಸ್ಯ ಬಲದ ಪೂರ್ತಿ ಬಹುಮತ ಇರುವುದರಿಂದ ಮೇಯರ್ ಆಯ್ಕೆ ವಿಚಾರದಲ್ಲಿ ಪ್ರಶ್ನೆ ಇರಲಿಲ್ಲ. ಆದರೂ ನಾಮಕೇವಾಸ್ತೆ ಚುನಾವಣಾ ಪ್ರಕ್ರಿಯೆ ನಡೆದಿತ್ತು. ಕಾಂಗ್ರೆಸ್ ನಿಂದ ಅನಿಲ್ ಕುಮಾರ್ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಬಿಜೆಪಿಯಿಂದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಉಪಸ್ಥಿತಿ ಇದ್ದುದರಿಂದ 46 ಮತಗಳು ಬಿಜೆಪಿ ಅಭ್ಯರ್ಥಿ ಪ್ರೇಮಾನಂದ ಶೆಟ್ಟಿಗೆ ಬಿದ್ದವು. ಕಾಂಗ್ರೆಸ್ ಅಭ್ಯರ್ಥಿಗೆ 14 ಮತಗಳು ಬಿದ್ದರೆ, ಎಸ್ಡಿಪಿಐ ಪಕ್ಷದ ಇಬ್ಬರು ತಟಸ್ಥರಾಗಿ ಉಳಿದರು.


ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಕುಂಜತ್ ಬೈಲ್ ವಾರ್ಡಿನ ಸುಮಂಗಲಾ ರಾವ್ ಮತ್ತು ಕಾಂಗ್ರೆಸಿನಿಂದ ಜೆಸಿಂತಾ ಡಿಸೋಜ ನಾಮಪತ್ರ ಸಲ್ಲಿಸಿದ್ದರು. ಕ್ರಮವಾಗಿ 46 ಮತ್ತು 14 ಮತಗಳು ಬಿದ್ದು ಮೊದಲೇ ನಿಶ್ಚಯಿಸಿದ ರೀತಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾದರು. ಮೇಯರ್ ಸಾಮಾನ್ಯ ಮತ್ತು ಉಪ ಮೇಯರ್ ಸಾಮಾನ್ಯ ಮಹಿಳೆಗೆ ಈ ಬಾರಿ ಬಂದಿತ್ತು. ಮಂಗಳೂರು ಉತ್ತರದಲ್ಲಿ ಇನ್ನಿಬ್ಬರು ಮಹಿಳಾ ಅಭ್ಯರ್ಥಿಗಳು ಉಪ ಮೇಯರ್ ಸ್ಥಾನಕ್ಕೆ ಆಕಾಂಕ್ಷಿಗಳಿದ್ದರು. ಆದರೆ, ಮೀಸಲಾತಿ ನೆಲೆಯಲ್ಲಿ ಅವರಿಗೆ ಮುಂದೆಯೂ ಸ್ಥಾನ ಲಭಿಸುವ ಸಾಧ್ಯತೆ ಇರುವುದರಿಂದ ಸಾಮಾನ್ಯ ವಿಭಾಗದ ಸುಮಂಗಲಾ ರಾವ್ ಅವರನ್ನು ಆಯ್ಕೆ ಮಾಡಲಾಗಿತ್ತು ಎಂದು ಪಕ್ಷದ ಕೆಲವರು ಹೇಳಿಕೊಂಡಿದ್ದರು.

ಮೇಯರ್, ಉಪ ಮೇಯರ್ ಆಯ್ಕೆಯಾಗುತ್ತಿದ್ದಂತೆ ಮೊದಲೇ ಕಾದಿದ್ದ ಅಭಿಮಾನಿಗಳು, ಪ್ರಮುಖರು ಮುಗಿಬಿದ್ದು ಹೂವಿನ ಮಾಲೆ ಅರ್ಪಿಸಿದರು.
Premananda Shetty, the Corporator of Mangladevi ward. was elected as the mayor and Sumangala Rao of the Kunjatbail ward as deputy mayor of Mangaluru City Corporation (MCC).
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm