ಬ್ರೇಕಿಂಗ್ ನ್ಯೂಸ್
03-03-21 11:07 pm Mangaluru correspondent ಕರಾವಳಿ
ಪುತ್ತೂರು, ಮಾ.3: ಇತ್ತೀಚೆಗೆ ರಕ್ಷಿತಾರಣ್ಯದಲ್ಲಿ ಮರ ಕಳ್ಳತನ ಆಗಿರುವ ಬಗ್ಗೆ ದೂರು ನೀಡಿ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದ ವ್ಯಕ್ತಿಯ ಮನೆಗೆ ಮಧ್ಯರಾತ್ರಿ ಸ್ಥಳೀಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳ ಶಾಮೀಲಾತಿ ಬಗ್ಗೆ ಕಡಬ ಸಮೀಪದ ಪ್ರಸಾದ್ ಎಂಬವರು ದೂರು ನೀಡಿದ್ದರು. ಇದರಿಂದ ತಮ್ಮ ಹುಳುಕು ಹೊರಬರುವ ಭಯದಲ್ಲಿ ನಿನ್ನೆ ರಾತ್ರಿ 1:30 ರ ವೇಳೆಗೆ ಏಕಾಏಕಿ ದಾಳಿ ನಡೆಸಿ, ಮನೆಯವರನ್ನು ದಬಾಯಿಸಿದ್ದಾರೆ ಎನ್ನಲಾಗಿದೆ.10 ರಿಂದ 15 ಜನ ಅಧಿಕಾರಿಗಳು ದಾಳಿ ನಡೆಸಿದ್ದು ಮನೆಯಲ್ಲಿದ್ದ ಪ್ರಸಾದ್ ಅವರ ಪತ್ನಿ ಮತ್ತು ಪುಟ್ಟ ಮಗುವಿಗೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಪ್ರಸಾದ್ ಅವರ ವೃದ್ಧ ತಂದೆ ತಾಯಿಯ ಮೇಲೆಯೂ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಮನೆಯ ಒಳಗೆ ಜಾಲಾಡಿದ ಸಿಬಂದಿ ಹಣ, ಕೆಲವು ಉಪಕರಣಗಳು, ಹಳೆಯ ಹಲಗೆ ಹೊತ್ತೊಯ್ದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಸಾದ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ದಾಳಿ ವೇಳೆ, ನೀವು ಮಾಧ್ಯಮಗಳಿಗೆ ತಿಳಿಸಿ ನಮ್ಮ ಮಾನ ತೆಗೆದಿದ್ದೀರಿ ಎಂದು ಗದರಿದ್ದು ದಾಖಲಾಗಿದೆ. ಈ ವೇಳೆ, ಕಡಬ ಪೊಲೀಸ್ ಸಿಬ್ಬಂದಿಯೂ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಆಗಮಿಸಿದ್ದರು.
Forest officials in Puttur assault on a man and his family for giving complaint against forest officers being involved in illegal activties.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm