ಬ್ರೇಕಿಂಗ್ ನ್ಯೂಸ್
04-03-21 04:43 pm Mangalore Correspondent ಕರಾವಳಿ
ಮಂಗಳೂರು, ಮಾ.4: ಕೆಂಜಾರು ವಿಮಾನ ನಿಲ್ದಾಣ ಬಳಿಯ ಕೆಐಎಡಿಬಿಗೆ ಸೇರಿದ ಜಾಗದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಮಾಡಿದ್ದ ಗೋಶಾಲೆಯನ್ನು ಜಿಲ್ಲಾಡಳಿತ ನೆಲಸಮ ಮಾಡಿದೆ.
1993ರಲ್ಲಿ ಕೆಐಎಡಿಬಿಗೆ ಮಾರಾಟ ಮಾಡಿದ್ದ ಸರಕಾರಿ ಜಾಗವನ್ನು ಹಾಗೇ ಬಿಡಲಾಗಿತ್ತು. ಫಲ್ಗುಣಿ ನದಿಗೆ ತಾಗಿಕೊಂಡಿದ್ದ ಸದ್ರಿ ಜಾಗದಲ್ಲಿ ಪ್ರಕಾಶ್ ಶೆಟ್ಟಿ ಎಂಬವರು ಕಳೆದ ಎಂಟು ವರ್ಷಗಳಿಂದ ಗೋಶಾಲೆ ನಿರ್ಮಿಸಿದ್ದರು. ಇಂಟರ್ಲಾಕ್ ಫ್ಯಾಕ್ಟರಿ ಮತ್ತು ಅದರ ಬದಿಯಲ್ಲೇ ಗೋವುಗಳಿಗೆ ಇರಲು ಶೆಲ್ಟರ್ ಮಾಡಿದ್ದರು. ಕಪಿಲಾ ಹೆಸರಿನ ಗೋಶಾಲೆಯಲ್ಲಿ ದೇಸೀ ಮತ್ತು ಅಪರೂಪದ ಗಿರ್ ತಳಿಯ ಗೋವುಗಳನ್ನು ಸಾಕಿದ್ದರು. ಅಲ್ಲದೆ, ಜಗತ್ತಿನಲ್ಲೇ ಅಪರೂಪ ಆಗಿರುವ ಕಪಿಲಾ ಗೋವಿನ ತಳಿಯನ್ನು ಸಾಕಿದ್ದರು. ತಿಳಿ ಹಳದಿ ಬಣ್ಣದ ಕಪಿಲಾ ಗೋವು ಭಾರತದ ದೇಸೀ ಗೋವು ಆಗಿದ್ದು ಕೃಷ್ಣ ಸಾಕಿದ್ದ ಗೋವು ಆಗಿದ್ದರಿಂದ ಕಪಿಲಾ ಎಂದು ಹೆಸರಿಸಲಾಗಿತ್ತು. ಈ ರೀತಿಯ ಗೋವು ದೇಶದಲ್ಲಿ ಐನೂರು ಮಾತ್ರ ಇದ್ದು ಅವುಗಳಲ್ಲಿ ನೂರರಷ್ಟು ಗೋವು ಪ್ರಕಾಶ್ ಶೆಟ್ಟಿಯವರ ಕಪಿಲಾ ಗೋಶಾಲೆಯಲ್ಲಿದ್ದವು. ಒಟ್ಟು 250 ರಷ್ಟು ಗೋವುಗಳಿದ್ದವು.

ಆದರೆ, ಕೆಐಎಡಿಬಿಗೆ ಸೇರಿದ ಕೆಂಜಾರಿನ ಜಾಗದಲ್ಲಿ ಇತ್ತೀಚೆಗೆ ಕೋಸ್ಟ್ ಗಾರ್ಡ್ ತರಬೇತಿ ಅಕಾಡೆಮಿ ಮಂಜೂರಾಗಿತ್ತು. ಆದರೆ, ಸದರಿ ಭೂಮಿಯಲ್ಲಿ ಗೋಶಾಲೆ ಮಾಡಿದ್ದಲ್ಲದೆ, ಗೋವುಗಳನ್ನು ಮೇಯಲು ಬಿಡಲು ಬಳಸುತ್ತಿದ್ದರು. ಭೂಮಿ ತೆರವು ಮಾಡಿಕೊಡಬೇಕಾದ ದ.ಕ ಜಿಲ್ಲಾಡಳಿತ ಇಂದು ಪೊಲೀಸರು ಹಾಗು ಸಹಾಯಕ ಕಮಿಷನರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಗೋಶಾಲೆ ಕಟ್ಟಡವನ್ನು ನೆಲಸಮ ಮಾಡಿದೆ.
ಗೋವುಗಳನ್ನು ಮೇಯಲು ಬಿಟ್ಟಿರುವ ವೇಳೆ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ. ಸದರಿ ಜಾಗದ ಮಾಲೀಕರಿಗೆ 1993ರಲ್ಲೇ ಪರಿಹಾರ ಕೊಟ್ಟು ಸ್ವಾಧೀನ ಪಡಿಸಿತ್ತು ಕೆಐಎಡಿಬಿ. ಸದ್ಯ ಹಳೆಯ ಮಾಲೀಕರು ಮೃತರಾಗಿದ್ದರು. ಈ ನಡುವೆ, ಪ್ರಕಾಶ್ ಶೆಟ್ಟಿ ಕೂಡ ಹತ್ತು ವರ್ಷಗಳ ಹಿಂದೆ ಜಾಗವನ್ನು ಮೂಲ ಮಾಲೀಕರಿಂದ ಖರೀದಿ ಮಾಡಿದ್ದರು ಎನ್ನಲಾಗುತ್ತಿದೆ.

ಇದೀಗ ಗೋಶಾಲೆ ಇಲ್ಲದೇ ನೂರಾರು ಗೋವುಗಳು ಬೀದಿಗೆ ಬಿದ್ದಿವೆ. ಗೋಶಾಲೆ ಕಟ್ಟಡದ ಜೊತೆಗೆ ಪ್ರಕಾಶ್ ಶೆಟ್ಟಿಗೆ ಸೇರಿದ ಇಂಟರ್ ಲಾಕ್ ಫ್ಯಾಕ್ಟರಿ ಕೂಡ ನೆಲಸಮವಾಗಿದೆ. ಏಕಾಏಕಿ ಗೋಶಾಲೆ ಇದ್ದ ಕಟ್ಟಡವನ್ನು ತೆರವುಗೊಳಿಸಿದ ಕ್ರಮವನ್ನು ಪ್ರಕಾಶ್ ಶೆಟ್ಟಿ ಆಕ್ಷೇಪಿಸಿದ್ದಾರೆ. ಬಿಜೆಪಿ ಸರಕಾರ ಗೋಶಾಲೆ, ಗೋವುಗಳ ರಕ್ಷಣೆಗೆ ಬೆಂಬಲ ನೀಡುವುದಾಗಿ ಹೇಳುತ್ತದೆ. ಆದರೆ, ಇಲ್ಲಿ ದೇಸೀ ತಳಿಗಳನ್ನೇ ಸಾಕಿದ್ದ ಗೋಶಾಲೆಯ ಕಟ್ಟಡವನ್ನೇ ನೆಲಸಮ ಮಾಡಿದ್ದಾರೆ ಎಂದಿದ್ದಾರೆ. ಇದರ ಬದಲಿಗೆ ಬೇರೆ ಸರಕಾರಿ ಜಾಗ ನೀಡುವ ಪ್ರಸ್ತಾಪ ಮುಂದಿಟ್ಟರೂ, ಪ್ರಕಾಶ್ ಶೆಟ್ಟಿ ಅದಕ್ಕೆ ಒಪ್ಪಿಲ್ಲ. ಈಗ ಇರುವ ಜಾಗದಲ್ಲಿ ಒಳ್ಳೆಯ ಹಸಿರು ಬಯಲು ಇದ್ದುದರಿಂದ ಗೋವುಗಳು ತಮ್ಮಷ್ಟಕ್ಕೆ ಮೇಯ್ದು ಬರುತ್ತಿದ್ದವು. ಬೋಳು ಜಾಗ ಒಂದಿಷ್ಟು ಕೊಟ್ಟರೆ ಮೇವಿಗೆ ಏನು ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.
The district administration cleared an illegal goshala on government land at Kenjar, on the outskirts of the city with help of the police force.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm