ಬ್ರೇಕಿಂಗ್ ನ್ಯೂಸ್
08-03-21 08:00 pm Mangaluru correspondent ಕರಾವಳಿ
ಮಂಗಳೂರು, ಮಾ.8: ಲಂಚ ಪಡೆದು ಸಿಕ್ಕಿಬಿದ್ದ ಮಂಗಳೂರು ತಾಲೂಕು ಕಚೇರಿಯ ಭೂದಾಖಲೆಗಳ ಸಹಾಯಕರ ಕಚೇರಿಯಲ್ಲಿ ಸರ್ವೆಯರ್ ಆಗಿ ಕೆಲಸ ಮಾಡುತ್ತಿದ್ದ ಗಂಗಾಧರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಆರೋಪಿ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿ ಜಾಗವನ್ನು ಅಳತೆ ಮಾಡಿ ನಕಾಶೆಯನ್ನು ನೀಡಲು ಉಳ್ಳಾಲದ ಸೊಹೈಲ್ ಎಂಬವರಿಂದ ಲಂಚದ ರೂಪದಲ್ಲಿ ರೂ.30,000 ಬೇಡಿಕೆ ಇಟ್ಟಿದ್ದ. ಬಳಿಕ ಮಾತುಕತೆ ನಡೆದು ರೂ. 20 ಸಾವಿರಕ್ಕೆ ಒಪ್ಪಿ 3,500 ರೂ. ಮುಂಗಡ ಪಡೆದಿದ್ದ. ಈ ವೇಳೆ, ಎಸಿಬಿಗೆ ತಿಳಿಸಿದ್ದು ಉಳಿಕೆ ಹಣ ರೂ. 16,500 ಸ್ವೀಕರಿಸುತ್ತಿದ್ದಾಗ ಕಳೆದ ಫೆ.23ರಂದು ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ದಾಳಿ ನಡೆಸಿದ್ದರು. ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಮತ್ತು ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಹಾಗೂ ಗುರುರಾಜ್ ಅವರಿದ್ದ ತಂಡ ಆರೋಪಿಯನ್ನು ಬಂದಿಸಿದ್ದರು.
ಆರೋಪಿ ಗಂಗಾಧರ್ ಮಂಗಳೂರಿನ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲರಾದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್, ಆರೋಪಿಗಳ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ಸಲ್ಲಿಸಿ, ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲು ಜಾಮೀನು ನೀಡಿದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ವಾದಿಸಿದ್ದರು.
Mangalore Bail plea of revenue surveyor who was caught over bribe charges by the ACB officials has been rejected.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm